ಸಾಂದರ್ಭಿಕ ಚಿತ್ರ 
ರಾಜ್ಯ

ಪಬ್, ಬಾರ್ ರೆಸ್ಟೋರೆಂಟ್ ಗಳಲ್ಲಿ ಮೇ.17ರವರೆಗೆ ಮದ್ಯ ಮಾರಾಟಕ್ಕೆ ಅನುಮತಿ: ಗ್ರಾಹಕರಲ್ಲಿ ಸಂತಸ, ಮಾಲೀಕರಿಗೆ ನಿರಾಸೆ

ಅಂಗಡಿಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದ ರಾಜ್ಯ ಸರ್ಕಾರ ಇದೀಗ ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಕೂಡ ಮೇ.17ರವರೆಗೆ ಚಿಲ್ಲರೆ ದರದಲ್ಲಿ ಮದ್ಯ ಮಾರಾಟಕ್ಕೆ ಅನುವು ಮಾಡಿಕೊಟ್ಟಿರುವುದು ಮಾಲೀಕರಿಗೆ ಮತ್ತು ಗ್ರಾಹಕರಿಗೆ ಕೊಂಚ ಖುಷಿ ತಂದರೆ ಸ್ವಲ್ಪ ನಿರಾಸೆ ತಂದೊಡ್ಡಿದೆ.

ಬೆಂಗಳೂರು: ಅಂಗಡಿಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದ ರಾಜ್ಯ ಸರ್ಕಾರ ಇದೀಗ ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಕೂಡ ಮೇ.17ರವರೆಗೆ ಚಿಲ್ಲರೆ ದರದಲ್ಲಿ ಮದ್ಯ ಮಾರಾಟಕ್ಕೆ ಅನುವು ಮಾಡಿಕೊಟ್ಟಿರುವುದು ಮಾಲೀಕರಿಗೆ ಮತ್ತು ಗ್ರಾಹಕರಿಗೆ ಕೊಂಚ ಖುಷಿ ತಂದರೆ ಸ್ವಲ್ಪ ನಿರಾಸೆ ತಂದೊಡ್ಡಿದೆ.

ಮೇ.17ರವರೆಗೆ ಗ್ರಾಹಕರು ಮದ್ಯಗಳನ್ನು ಖರೀದಿಸಿ ಮನೆಗೆ ತೆಗೆದುಕೊಂಡು ಹೋಗಿ ಬಳಸಬೇಕಾಗುತ್ತದೆ. ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಕುಳಿತು ಸೇವಿಸಲು ಅವಕಾಶವಿರುವುದಿಲ್ಲ. ರಾಜ್ಯ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಇಂದು ಪಬ್, ಬಾರ್ ಅಂಡ್ ರೆಸ್ಟೋರೆಂಟ್ ಗಳು ತೆರೆದು ಗ್ರಾಹಕರು ಮದ್ಯ ಖರೀದಿಗೆ ಬರುತ್ತಿರುವುದು ಕಂಡುಬಂತು.

ಶಿವಮೊಗ್ಗದ ಬಾರ್ ಮಾಲೀಕ ಮಹೇಶ್ ಮಾತನಾಡಿ, ನಮ್ಮ ವ್ಯಾಪಾರಕ್ಕೆ ಇದರಿಂದ ಪ್ರಯೋಜನವಾಗುವುದಿಲ್ಲ. ಈಗಿರುವ ಸಂಗ್ರಹವನ್ನು ಮಾರಾಟ ಮಾಡುತ್ತಿದ್ದೇವಷ್ಟೆ. ಎಂಆರ್ ಪಿ ದರದಲ್ಲಿ ಮದ್ಯ ಮಾರಾಟ ಮಾಡಲು ರಾಜ್ಯ ಸರ್ಕಾರ ನಮಗೆ ಸೂಚಿಸಿದೆ. ಕಳೆದ ಎರಡು ತಿಂಗಳಿನಿಂದ ಕೊರೋನಾ ವೈರಸ್ ನಿಂದ ಬಾರ್ ಮುಚ್ಚಿ ಈಗಾಗಲೇ ಸಾಕಷ್ಟು ನಷ್ಟ ಅನುಭವಿಸಿದ್ದೇವೆ. ಕಟ್ಟಡ ಬಾಡಿಗೆ ಮತ್ತು ಕಾರ್ಮಿಕರ ವೇತನ ಹೆಚ್ಚಾಗಿರುವುದರಿಂದ ನಮಗೆ ಇದು ಹೆಚ್ಚಿನ ಪ್ರಯೋಜನವಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel