ಸಿಸಿ ಪಾಟೀಲ್ 
ರಾಜ್ಯ

ಕೊರೋನಾ: ನೆಮ್ಮದಿಯಲ್ಲಿ ಜವಾಬ್ದಾರಿಯಿಂದ ನುಣುಚಿಕೊಳ್ಳದಿರಿ - ಸಿಸಿ ಪಾಟೀಲ್

ಗದಗ ಜಿಲ್ಲೆಯ ಚಿಕಿತ್ಸೆಯಲ್ಲಿದ್ದ ಕೊವಿಡ್-19 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ನಮಗೆಲ್ಲ  ಒಂದು ಹಂತದ ನೆಮ್ಮದಿ ನೀಡಿದೆ.

ಗದಗ: ಗದಗ ಜಿಲ್ಲೆಯ ಚಿಕಿತ್ಸೆಯಲ್ಲಿದ್ದ ಕೊವಿಡ್-19 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ನಮಗೆಲ್ಲ  ಒಂದು ಹಂತದ ನೆಮ್ಮದಿ ನೀಡಿದೆ.

ಆದರೆ ಕೊವಿಡ್-19 ಸೋಂಕು ತಡೆ ಕುರಿತ ಜಿಲ್ಲೆಯ  ಸಾರ್ವಜನಿಕರು, ಯುವಜನರ ಮತ್ತು ಅಧಿಕಾರಿ ಸಿಬ್ಬಂದಿಯಾದಿಯಾಗಿ ಸರ್ವರೂ ಹೆಚ್ಚಿನ  ಜವಾಬ್ದಾರಿಯಿಂದ ಜೀವನವನ್ನು ನಡೆಸಬೇಕಾದ ಕುರಿತು ರಾಜ್ಯದ ಗಣಿ ಭೂವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಎಚ್ಚರಿಕೆಯ ಮನವಿ ಮಾಡಿದ್ದಾರೆ.

ಕೊವಿಡ್-19 ಸೋಂಕಿನ  ತಡೆ ಮತ್ತು ನಿಯಂತ್ರಣ ಕುರಿತು ಎಲ್ಲರೂ  ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಅನವಶ್ಯಕ ಓಡಾಟ, ಪ್ರಯಾಣ ನಿಲ್ಲಿಸುವ, ಮುಖಕ್ಕೆ ಮಾಸ್ಕ, ಸ್ಯಾನಿಟೈಜರ್ ಉಪಯೋಗ, ಆಗಾಗ ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳುವದು ನಮ್ಮ ನಿತ್ಯದ  ಅಭ್ಯಾಸವಾಗಬೇಕು. ಎಲ್ಲರೂ ಈ ಮುಂಜಾಗ್ರತಾ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಿದಲ್ಲಿ ಮಾತ್ರ ಕೊವಿಡ್-19 ಸೋಂಕನ್ನು ಯಶಸ್ವಿಯಾಗಿ ತಡೆಗಟ್ಟಬಹುದು.

ಕೊವಿಡ್-19  ಈಗ ದೇಶದ ಸರ್ಕಾರದ ಸಮಸ್ಯೆ ಮಾತ್ರವಲ್ಲ ಪ್ರತಿ ವ್ಯಕ್ತಿ, ಕುಟುಂಬ, ಸಮಾಜಗಳ ಅಳಿವು ಉಳಿವಿನ ಪ್ರಶ್ನೆ ಎಂಬುದನ್ನು ನಾವು ಅರಿತುಕೊಂಡು ತಪ್ಪದೇ ವೈಯಕ್ತಿಕ, ಸಾಮಾಜಿಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಸಚಿವ ಸಿ.ಸಿ.ಪಾಟೀಲ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!