ಸಿಸಿ ಪಾಟೀಲ್ 
ರಾಜ್ಯ

ಕೊರೋನಾ: ನೆಮ್ಮದಿಯಲ್ಲಿ ಜವಾಬ್ದಾರಿಯಿಂದ ನುಣುಚಿಕೊಳ್ಳದಿರಿ - ಸಿಸಿ ಪಾಟೀಲ್

ಗದಗ ಜಿಲ್ಲೆಯ ಚಿಕಿತ್ಸೆಯಲ್ಲಿದ್ದ ಕೊವಿಡ್-19 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ನಮಗೆಲ್ಲ  ಒಂದು ಹಂತದ ನೆಮ್ಮದಿ ನೀಡಿದೆ.

ಗದಗ: ಗದಗ ಜಿಲ್ಲೆಯ ಚಿಕಿತ್ಸೆಯಲ್ಲಿದ್ದ ಕೊವಿಡ್-19 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ನಮಗೆಲ್ಲ  ಒಂದು ಹಂತದ ನೆಮ್ಮದಿ ನೀಡಿದೆ.

ಆದರೆ ಕೊವಿಡ್-19 ಸೋಂಕು ತಡೆ ಕುರಿತ ಜಿಲ್ಲೆಯ  ಸಾರ್ವಜನಿಕರು, ಯುವಜನರ ಮತ್ತು ಅಧಿಕಾರಿ ಸಿಬ್ಬಂದಿಯಾದಿಯಾಗಿ ಸರ್ವರೂ ಹೆಚ್ಚಿನ  ಜವಾಬ್ದಾರಿಯಿಂದ ಜೀವನವನ್ನು ನಡೆಸಬೇಕಾದ ಕುರಿತು ರಾಜ್ಯದ ಗಣಿ ಭೂವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಎಚ್ಚರಿಕೆಯ ಮನವಿ ಮಾಡಿದ್ದಾರೆ.

ಕೊವಿಡ್-19 ಸೋಂಕಿನ  ತಡೆ ಮತ್ತು ನಿಯಂತ್ರಣ ಕುರಿತು ಎಲ್ಲರೂ  ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಅನವಶ್ಯಕ ಓಡಾಟ, ಪ್ರಯಾಣ ನಿಲ್ಲಿಸುವ, ಮುಖಕ್ಕೆ ಮಾಸ್ಕ, ಸ್ಯಾನಿಟೈಜರ್ ಉಪಯೋಗ, ಆಗಾಗ ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳುವದು ನಮ್ಮ ನಿತ್ಯದ  ಅಭ್ಯಾಸವಾಗಬೇಕು. ಎಲ್ಲರೂ ಈ ಮುಂಜಾಗ್ರತಾ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಿದಲ್ಲಿ ಮಾತ್ರ ಕೊವಿಡ್-19 ಸೋಂಕನ್ನು ಯಶಸ್ವಿಯಾಗಿ ತಡೆಗಟ್ಟಬಹುದು.

ಕೊವಿಡ್-19  ಈಗ ದೇಶದ ಸರ್ಕಾರದ ಸಮಸ್ಯೆ ಮಾತ್ರವಲ್ಲ ಪ್ರತಿ ವ್ಯಕ್ತಿ, ಕುಟುಂಬ, ಸಮಾಜಗಳ ಅಳಿವು ಉಳಿವಿನ ಪ್ರಶ್ನೆ ಎಂಬುದನ್ನು ನಾವು ಅರಿತುಕೊಂಡು ತಪ್ಪದೇ ವೈಯಕ್ತಿಕ, ಸಾಮಾಜಿಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಸಚಿವ ಸಿ.ಸಿ.ಪಾಟೀಲ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

SCROLL FOR NEXT