ಸಾಂದರ್ಭಿಕ ಚಿತ್ರ 
ರಾಜ್ಯ

ಉ.ಪ್ರ ಮಾದರಿಯಲ್ಲಿ ಕರ್ನಾಟಕವೂ ತರಲಿದೆಯೇ ಕಾರ್ಮಿಕ ಕಾನೂನಿಗೆ ತಿದ್ದುಪಡಿ?ಮಾತುಕತೆ ಹಂತದಲ್ಲಿ ಇಲಾಖೆ

ಸಂಬಂಧಪಟ್ಟವರೊಂದಿಗೆ ಚರ್ಚೆ, ಸಮಾಲೋಚನೆ ನಡೆಸಿ ಈಗಿರುವ ಕಾರ್ಮಿಕ ಕಾನೂನನ್ನು ತಿದ್ದುಪಡಿ ಮಾಡಲು ರಾಜ್ಯ ಕಾರ್ಮಿಕ ಇಲಾಖೆ ಚಿಂತನೆ ನಡೆಸುತ್ತಿದೆ.

ಬೆಂಗಳೂರು:ಸಂಬಂಧಪಟ್ಟವರೊಂದಿಗೆ ಚರ್ಚೆ, ಸಮಾಲೋಚನೆ ನಡೆಸಿ ಈಗಿರುವ ಕಾರ್ಮಿಕ ಕಾನೂನನ್ನು ತಿದ್ದುಪಡಿ ಮಾಡಲು ರಾಜ್ಯ ಕಾರ್ಮಿಕ ಇಲಾಖೆ ಚಿಂತನೆ ನಡೆಸುತ್ತಿದೆ.

ಕರ್ನಾಟಕದಲ್ಲಿರುವ ಕೈಗಾರಿಕೆಗಳು ಉತ್ತರ ಪ್ರದೇಶದ ಮಾದರಿಯನ್ನು ಬಯಸುತ್ತಿದ್ದು, ಅದಕ್ಕಿಂತಲೂ ಉತ್ತಮವಾದ ಕೈಗಾರಿಕಾ ನೀತಿಯನ್ನು ಜಾರಿಗೆ ತರಲು ಯೋಜನೆಗಳು ನಡೆಯುತ್ತಿವೆ ಎಂದು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಪಿ ತಿಳಿಸಿದ್ದಾರೆ.

ರಾಜ್ಯದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಿ ಭದ್ರಪಡಿಸಲು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಮುಂದಿನ ಮೂರು ವರ್ಷಗಳಿಗೆ ಬಹುತೇಕ ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸುವ ವಿಧೇಯಕಕ್ಕೆ ಒಪ್ಪಿಗೆ ನೀಡಿತ್ತು. ಕರ್ನಾಟಕ ಸರ್ಕಾರ ಕೂಡ ಲಾಕ್ ಡೌನ್ ಮುಗಿದ ನಂತರ ಆರ್ಥಿಕತೆಯ ಬೆಳವಣಿಗೆಗೆ ಹಲವು ಆಯ್ಕೆಗಳನ್ನು ಪರೀಕ್ಷಿಸುತ್ತಿದೆ.

ಈ ಬಗ್ಗೆ ಮಾಹಿತಿ ನೀಡಲು ಸದ್ಯ ಸಂಬಂಧಪಟ್ಟ ಪಾಲುದಾರರೊಂದಿಗೆ ಮಾತುಕತೆ ಹಂತದಲ್ಲಿದೆ. ಮುಂದಿನ ದಿನಗಳಲ್ಲಿ ವ್ಯಾಪಾರ ಸಂಘಟನೆಗಳು ಮತ್ತು ಒಕ್ಕೂಟಗಳೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಮಣಿವಣ್ಣನ್ ಹೇಳಿದರು.ಏಪ್ರಿಲ್ ತಿಂಗಳ ವೇತನ ನೀಡದ ಅಥವಾ ಕಡಿತ ಮಾಡಿದ ಮಾಲೀಕರಿಗೆ ನೊಟೀಸ್ ಹೊರಡಿಸುವ ಬಗ್ಗೆ ಕೇಳಿದಾಗ ಈ ವಿಷಯವನ್ನು ಕೈಗಾರಿಕಾ ಒಕ್ಕೂಟ, ವ್ಯಾಪಾರ ಒಕ್ಕೂಟ ಮತ್ತು ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆ ಮುಂದಿಡಲಾಗಿದೆ. ಇದುವರೆಗೆ ನೊಟೀಸ್ ಜಾರಿ ಮಾಡಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ