ಭವಾನಿಕೊಪ್ಪಲು ಬಳಿ ಚಿರತೆಗಳು ಪ್ರತ್ಯಕ್ಷ; ಜನರಲ್ಲಿ ಆತಂಕ 
ರಾಜ್ಯ

ಭವಾನಿಕೊಪ್ಪಲು ಬಳಿ ಚಿರತೆಗಳು ಪ್ರತ್ಯಕ್ಷ; ಜನರಲ್ಲಿ ಆತಂಕ

ರಸ್ತೆ ಪಕ್ಕದಲ್ಲಿಯೇ ಮೂರು ಚಿರತೆಗಳು ಶನಿವಾರ ರಾತ್ರಿ ಕಾಣಿಸಿಕೊಂಡಿದ್ದು ಜನತೆ ಭಯಭೀತರಾಗಿರುವ ಘಟನೆ ಮಂಡ್ಯತಾಲೂಕು ಬಸರಾಳು ಹೋಬಳಿ ಭವಾನಿ ಕೊಪ್ಪಲು ಗ್ರಾಮದ ಬಳಿ ನಡೆದಿದೆ.

ಮಂಡ್ಯ: ರಸ್ತೆ ಪಕ್ಕದಲ್ಲಿಯೇ ಮೂರು ಚಿರತೆಗಳು ಶನಿವಾರ ರಾತ್ರಿ ಕಾಣಿಸಿಕೊಂಡಿದ್ದು ಜನತೆ ಭಯಭೀತರಾಗಿರುವ ಘಟನೆ ಮಂಡ್ಯತಾಲೂಕು ಬಸರಾಳು ಹೋಬಳಿ ಭವಾನಿ ಕೊಪ್ಪಲು ಗ್ರಾಮದ ಬಳಿ ನಡೆದಿದೆ.

ನಿನ್ನೆ ರಾತ್ರಿ ಭವಾನಿ ಕೊಪ್ಪಲು ಗ್ರಾಮದ ಯುವಕರಿಗೆ ದೊಡ್ಡಗರುಡನ ಹಳ್ಳಿಯಿಂದ ಭವಾನಿ ಕೊಪ್ಪಲು ಕಡೆಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ರಸ್ತೆ ಪಕ್ಕದಲ್ಲಿಯೇ ಮೂರು ಚಿರತೆಗಳು ಕಾಣಿಸಿಕೊಂಡಿವೆ.ಬೈಕ್ ಲೈಟ್ನ ಬೆಳಕಿನಿಂದ ನೋಡುವ ಪ್ರಯತ್ನ ಮಾಡಿದಾಗ ಮನುಷ್ಯರು ಮಾತನಾಡುವ ಶಬ್ದ ಮತ್ತು ಬೆಳಕು ಕಂಡ ತಕ್ಷಣ ಪರಾರಿಯಾಗಿವೆ.

ರಾತ್ರಿ ವೇಳೆ ಹೋಗುತ್ತಿರುವಾಗ ಕಣ್ಣಿಗೆ ಕಂಡ ದೊಡ್ಡಗಾತ್ರದ ಮೂರು ಚಿರತೆಗಳ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಭವಾನಿಕೊಪ್ಪಲು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಆದರೆ ಚಿರತೆಗಳ ಹಾವಳಿ ಜಾಸ್ತಿಯಾಗಿರುವ ಬಗ್ಗೆ ವಿಷಯವನ್ನು ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ,ಇಲ್ಲಿಯವರೆಗೂ ಚಿರತೆಗಳ ಹಾವಳಿ ತಡೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸ್ಥಳಿಯರು ಆಕ್ರೋಶವ್ಯಕ್ತಪಡಿಸಿದ್ದಾರೆ. ಜನಸಾಮಾನ್ಯರಿಗೆ ಹಾಗೂ ಜಾನುವಾರುಗಳ ಪ್ರಾಣಕ್ಕೆ ಈ ಚಿರತೆಗಳು ಸಂಚಕಾರ ತಂದರೆ ಮುಂದೇನುಗತಿ ಅಂತಾ ಆತಂಕವ್ಯಕ್ತಪಡಿಸಿರುವ ಸ್ಥಳೀಯರು ಒಂದು ವೇಳೆ ನಷ್ಟವಾದರೆ ಹಾಗೂ ಹಾನಿಯುಂಟಾದರೆ ಅರಣ್ಯಾಧಿಕಾರಿಗಳು ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳೇ ನೇರ ಹೊಣೆ ಹಾಗೂ ಜವಾಬ್ದಾರರು ಆಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇತ್ತೀಚೆಗೆ ಹೆಚ್ಚಾಗಿರುವ ಚಿರತೆಯ ಹಾವಳಿಯಿಂದಾಗಿ ಭವಾನಿಕೊಪ್ಪಲು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಯ ರೈತರು, ಮಕ್ಕಳು ಮತ್ತು ಮಹಿಳೆಯರು ಭಯಬೀತರಾಗಿದ್ದು ತಕ್ಷಣವೇ ಚಿರತೆಗಳ ಸೆರೆಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

-ನಾಗಯ್ಯ 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT