ಸಿಎಫ್ ಟಿಆರ್ ಐ 
ರಾಜ್ಯ

ಸ್ಪಿರುಲಿನಾ ಚಿಕ್ಕಿಗಳು ಕೋವಿಡ್-19ಗೆ ಔಷಧಿಯಲ್ಲ: ಕೆಲ ಮಾಧ್ಯಮಗಳ ವರದಿ ಸುಳ್ಳು- ಸಿಎಫ್ ಟಿಆರ್ ಐ ಸ್ಪಷ್ಟನೆ

ಸ್ಪಿರುಲಿನಾ ಚಿಕ್ಕಿ ತಿಂದರೆ ಕೋವಿಡ್ 19 ಸೋಂಕು ನಿವಾರಣೆಗೆ ಸಹಕಾರಿಯಾಗುತ್ತದೆ. ಸೋಂಕು ನಿಯಂತ್ರಣದಲ್ಲಿ ಇದು ರಾಮಬಾಣ ಎಂಬ ವರದಿಗಳನ್ನು ಮೈಸೂರಿನ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನ ಸಂಸ್ಥೆ -ಸಿ.ಎಫ್.ಟಿ.ಆರ್.ಐ ಅಲ್ಲಗಳೆದಿದೆ. 

ಬೆಂಗಳೂರು: ಸ್ಪಿರುಲಿನಾ ಚಿಕ್ಕಿ ತಿಂದರೆ ಕೋವಿಡ್ 19 ಸೋಂಕು ನಿವಾರಣೆಗೆ ಸಹಕಾರಿಯಾಗುತ್ತದೆ. ಸೋಂಕು ನಿಯಂತ್ರಣದಲ್ಲಿ ಇದು ರಾಮಬಾಣ ಎಂಬ ವರದಿಗಳನ್ನು ಮೈಸೂರಿನ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನ ಸಂಸ್ಥೆ -ಸಿ.ಎಫ್.ಟಿ.ಆರ್.ಐ ಅಲ್ಲಗಳೆದಿದೆ. 

ಈ ಬಗ್ಗೆ ಸಿ.ಎಫ್.ಟಿ.ಆರ್.ಐ ನಿರ್ದೇಶಕರು ಹೇಳಿಕೆ ನೀಡಿದ್ದು, ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಸ್ಪಿರುಲಿನಾ ಚಿಕ್ಕಿಗಳು ಕೋವಿಡ್ – ೧೯ಗೆ ರಾಮಬಾಣ ಎಂದು ವರದಿ ಮಾಡಿರುವುದು ಸತ್ಯಕ್ಕೆ ದೂರವಾದ ಸಂಗತಿ ಎಂದು ಸ್ಪಷ್ಟಪಡಿಸಿದ್ದಾರೆ.

ಮೈಸೂರಿನ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನ ಸಂಸ್ಥೆ ನಿರ್ದೇಶಕ ಡಾ . ಎಸ್ ಎಂ . ಎಸ್ . ರಾಘವರಾವ್ ಅವರು, ಅಭಿವೃದ್ಧಿಪಡಿಸಿದ  ಸ್ಪಿರುಲಿನಾ ಚಿಕ್ಕಿಗಳಾಗಲಿ ಅಥವಾ ಸರಬರಾಜು ಮಾಡಿದ ಇತರೆ ಉತ್ಪನ್ನಗಳಲ್ಲಿ 
ಯಾವುದೇ ರೋಗ ಇಲ್ಲವೇ ಖಾಯಿಲೆಗೆ ಅನುಕೂಲಕರ ಎಂದು ಸಿಎಫ್ ಆರ್ ಟಿಐ ಎಲ್ಲಿಯೂ ಹೇಳಿಲ್ಲ ಎಂದಿದ್ದಾರೆ. 

ಸ್ಪಿರುಲಿನಾ ಚಿಕ್ಕಿಗಳು ರೋಗಪ್ರತಿರೋಧವನ್ನು ಹೆಚ್ಚಿಸಲು ಬಳಸಬಹುದಾದ ಪೂರಕ ಆಹಾರಗಳು ಹಾಗೂ ಮಕ್ಕಳಲ್ಲಿ ಕಾಣುವ ನ್ಯೂನತೆ ಪೋಷಣೆಯನ್ನು ಸುಧಾರಿಸಲೆಂದು ಅಭಿವೃದ್ಧಿಪಡಿಸಲಾಗಿದೆ. ಕೋವಿಡ್-19ಕ್ಕೆ ಚಿಕಿತ್ಸೆಗಾಗಿ ಅಭಿವೃದ್ಧಿ ಪಡಿಸಿದ್ದಲ್ಲ ಎಂದು ಮೈಸೂರಿನ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ಸಮನ್ವಯಕ ಎ.ಎಸ್.ಕೆ.ವಿ.ಎಸ್.ಶರ್ಮಾ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT