ಯಡಿಯೂರಪ್ಪ 
ರಾಜ್ಯ

ತಾಯ್ನಾಡಿಗೆ ಬರುವವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ, ಮರಣ ಹೊಂದಿದ ಊರಲ್ಲೇ ಅಂತ್ಯ ಸಂಸ್ಕಾರ: ಸಿಎಂ

‘ಹೊರರಾಜ್ಯ, ಹಾಗೂ ದೇಶಗಳಿಂದ ಕರ್ನಾಟಕಕ್ಕೆ  ಬರುವವರು ಕ್ವಾರಂಟೈನ್‌ಗೆ ಒಳಪಡುವುದು ಕಡ್ಡಾಯ. ಅಲ್ಲದೆ, ಅಂಥವರು ಆನ್‌ಲೈನ್‌ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು: ‘ಹೊರರಾಜ್ಯ, ಹಾಗೂ ದೇಶಗಳಿಂದ ಕರ್ನಾಟಕಕ್ಕೆ  ಬರುವವರು ಕ್ವಾರಂಟೈನ್‌ಗೆ ಒಳಪಡುವುದು ಕಡ್ಡಾಯ. ಅಲ್ಲದೆ, ಅಂಥವರು ಆನ್‌ಲೈನ್‌ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಮತ್ತು ಹಿರಿಯ  ಅಧಿಕಾರಿಗಳ ಜೊತೆ ಭಾನುವಾರ ಸಭೆ ನಡೆಸಿದ ಮುಖ್ಯಮಂತ್ರಿ, ಬೇರೆ ಬೇರೆ ದೇಶ ಹಾಗು ರಾಜ್ಯದಿಂದ ಕನ್ನಡಿಗರು ವಾಪಸಾಗುತ್ತಿದ್ದು, ಅವರನ್ನು ಯಾವ ರೀತಿ ಕ್ವಾರಂಟೈನ್  ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಸಿದರು. 'ಹೊರ ರಾಜ್ಯದಿಂದ ಬರುವ ಕನ್ನಡಿಗರು‌ ನಿರ್ದಿಷ್ಟ ವ್ಯವಸ್ಥೆಯಡಿ ಬರುವಂತೆ ಮಾಡಬೇಕು. 

ಹೊರರಾಜ್ಯ, ದೇಶಗಳಿಂದ ತಾಯ್ನಾಡಿಗೆ ಬರುವವರು ಕ್ವಾರಂಟೈನ್‌ಗೆ ಒಳಪಡುವುದು ಕಡ್ಡಾಯ.  ರಾಜ್ಯಕ್ಕೆ ಬರುವವರು‌ ಕಡ್ಡಾಯವಾಗಿ ರಾಜ್ಯದಿಂದ ಅನಿವಾರ್ಯವಾಗಿ ಹೊರ ಹೋಗಿ ಸಿಕ್ಕಿಹಾಕಿ ,ಎಲ್ಲಿಗೆ ಬರುತ್ತೇವೆ ಮತ್ತು ಯಾವಾಗ ಬರುತ್ತೇವೆ ಎಂಬುವುದನ್ನು ಆನ್‌ಲೈನ್‌ನಲ್ಲಿ ನೋಂದಣಿ ಮಾಡಬೇಕು' ಎಂದರು. 'ರಾಜ್ಯಕ್ಕೆ ಬಂದ ತಕ್ಷಣ ಯಾರೂ
ಅವರವರ ಊರಿಗೆ ಹೋಗುವಂತಿಲ್ಲ. ಬಂದವರೆಲ್ಲರೂ 14 ದಿನ‌ ಕ್ವಾರಂಟೈನ್ ಆಗಲೇಬೇಕು ಎಂದು ತಿಳಿಸಿದ್ದಾರೆ

ಇನ್ನೂ ಬೇರೆ ಸ್ಥಳಗಳಲ್ಲಿ ವ್ಯಕ್ತಿ ಮರಣ ಹೊಂದಿದರೇ ಅದೇ ಸ್ಥಳದಲ್ಲಿ ಅಂತ್ಯ ಸಂಸ್ಕಾರ ನಡೆಸಬೇಕು, ಮೃತ ದೇಹಗಳನ್ನು ರಾಜ್ಯಕ್ಕೆ ತರಲು ಬಿಡುವುದಿಲ್ಲ ಎಂದು ಸಿಎಂ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT