ಆಶಾ ಕಾರ್ಯಕರ್ತರು 
ರಾಜ್ಯ

ಮಂಗಳೂರು: ಆಶಾ ಕಾರ್ಯಕರ್ತೆ ಮೇಲೆ ಮಂತ್ರವಾದಿಯಿಂದ ಪೊರಕೆಯಿಂದ ಹಲ್ಲೆ

ಮನೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸೇರುತ್ತಿದ್ದ ಜನರ ಬಗ್ಗೆ ವಿಚಾರಿಸಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ಪೊರಕೆಯಲ್ಲಿ ಹಲ್ಲೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ಸಂಭವಿಸಿದೆ.

ಮಂಗಳೂರು: ಮನೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸೇರುತ್ತಿದ್ದ ಜನರ ಬಗ್ಗೆ ವಿಚಾರಿಸಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ಪೊರಕೆಯಲ್ಲಿ ಹಲ್ಲೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ಸಂಭವಿಸಿದೆ.

ಶ್ರೀಮತಿ ಎಂಬ ಮಹಿಳೆಯಿಂದ ಆಶಾ ಕಾರ್ಯಕರ್ತೆಗೆ ಹಲ್ಲೆ ಯತ್ನ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಶ್ರೀಮತಿಯ ಪತಿ ವಿಶ್ವನಾಥ ಎಂಬಾತನಿಂದ ಮನೆಯಲ್ಲಿ ಮಂತ್ರವಾದಿ ಕಾರ್ಯಗಳು ನಡಯುತ್ತಿದ್ದು, ಹೀಗಾಗಿ ಇವರ ಮನೆಗೆ ಹತ್ತಾರು ಜನ ಬರುತ್ತಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಜನ ಸೇರಿದ್ದನ್ನ ಆಶಾ ಕಾರ್ಯಕರ್ತೆ ಪುಷ್ಪಲತಾ ಅವರು ಪ್ರಶ್ನಿಸಿದ್ದಾರೆ.

ಬಳಿಕ ಸ್ಥಳೀಯ ಕುಕ್ಕಿಪಾಡಿ ಪಂಚಾಯತ್ ಸದಸ್ಯರಾದ ಯೋಗೀಶ್ ಆಚಾರ್ಯ ಎಂಬವರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪಂಚಾಯತ್ ಸದಸ್ಯನ ಮೇಲೂ ಹಲ್ಲೆ ಯತ್ನ ನಡೆದಿದೆ ಅಂತ ಹೇಳಲಾಗುತ್ತಿದೆ. 

ಇದೀಗ ಆಶಾ ಕಾರ್ಯಕರ್ತೆಗೂ ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಮುಂದಾದ ಮಹಿಳೆಯ ಮೇಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT