ರಾಜಾ ರಂಗಪ್ಪ ನಾಯಕ 
ರಾಜ್ಯ

ಮಾಜಿ ಸಂಸದ ರಾಜಾ ರಂಗಪ್ಪ ನಾಯಕ್ ನಿಧನ

ಮಾಜಿ ಸಂಸದ ರಾಜಾ ರಂಗಪ್ಪ ನಾಯಕ್ ಸೋಮವಾರ ಇಲ್ಲಿ ನಿಧನರಾಗಿದ್ದಾರೆ.

ರಾಯಚೂರು: ಮಾಜಿ ಸಂಸದ ರಾಜಾ ರಂಗಪ್ಪ ನಾಯಕ್ ಸೋಮವಾರ ಇಲ್ಲಿ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಪತ್ನಿ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ರಂಗಪ್ಪ ಅವರು 1996ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಜೆಡಿಎಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದರು.

1996ರ ಚುನಾವಣೆಯಲ್ಲಿ ಒಟ್ಟು ಜೆಡಿಎಸ್‌ನಿಂದ 16 ಮಂದಿ ಗೆದ್ದಿದ್ದರು. ಅದರಲ್ಲಿ ರಂಗಪ್ಪ ಕೂಡ ಒಬ್ಬರಾಗಿದ್ದರು.
ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ರಂಗಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಜಲಸಂಪನ್ಮೂಲ ಸಚಿವ, ಬಿಜೆಪಿ ಹಿರಿಯ ನಾಯಕ ರಮೇಶ್ ಜಾರಕಿಹೊಳಿ ಸಂತಾಪ ಸೂಚಿಸಿ, ರಂಗಪ್ಪ ಅವರು ಅತ್ಯಂತ ಹಿಂದುಳಿದ ಪ್ರದೇಶವಾದ ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ ಎಂದು ಸ್ಮರಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಸಂತಾಪ:
ರಾಜಕೀಯ ಮನೆತನದ ಹಿನ್ನೆಲೆಯುಳ್ಳ ಜನಪರ ಕಾಳಜಿಯ ಮಾಜಿ ಸಂಸದರಾಗಿದ್ದ ರಾಜಾ ರಂಗಪ್ಪ ನಾಯಕ ಅವರ ನಿಧನದಿಂದಾಗಿ ಓರ್ವ ಉತ್ತಮ ವಾಕ್ಪಟು ಅವರನ್ನು ಕಳೆದುಕೊಂಡಂತಾಗಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಅವರು ಸಂತಾಪ ಸೂಚಿಸಿದ್ದಾರೆ.

ರಾಜಾ ರಂಗಪ್ಪ ನಾಯಕ ಅವರು ಮಾಜಿ ಶಾಸಕ ರಾಜಾ ವೆಂಟಕಪ್ಪ ನಾಯಕ ಅವರ ಸಹೋದರರು ಹಾಗೂ ಮಾಜಿ ಶಾಸಕ ರಾಜಾ ಕುಮಾರ ನಾಯಕ್ ಅವರ ಪುತ್ರರು. ರಾಜಾ ಕುಮಾರ ನಾಯಕ, ರಾಜಾ ವೆಂಕಟಪ್ಪ ನಾಯಕ ಹಾಗೂ ರಾಜಾ ರಂಗಪ್ಪ ನಾಯಕ ಅವರು ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಮಾಜಿ ಕೇಂದ್ರ ಸಚಿವ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಆಪ್ತರಾಗಿದ್ದರು. ಅವರ ಒಡನಾಟ ಹಾಗೂ ಜನಪರ ಕಾಳಜಿಯನ್ನು ನೆನೆಯುತ್ತಾ, ನಿಧನರಾದ ರಾಜಾ ರಂಗಪ್ಪ ನಾಯಕ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಅಗಲಿಕೆ ನೋವು ಮರೆಯುವ ಶಕ್ತಿ ಕುಟುಂಬ ವರ್ಗದವರಿಗೆ ನೀಡುವಂತೆ ಆ ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಶಾಸಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT