ರಾಜಾ ರಂಗಪ್ಪ ನಾಯಕ 
ರಾಜ್ಯ

ಮಾಜಿ ಸಂಸದ ರಾಜಾ ರಂಗಪ್ಪ ನಾಯಕ್ ನಿಧನ

ಮಾಜಿ ಸಂಸದ ರಾಜಾ ರಂಗಪ್ಪ ನಾಯಕ್ ಸೋಮವಾರ ಇಲ್ಲಿ ನಿಧನರಾಗಿದ್ದಾರೆ.

ರಾಯಚೂರು: ಮಾಜಿ ಸಂಸದ ರಾಜಾ ರಂಗಪ್ಪ ನಾಯಕ್ ಸೋಮವಾರ ಇಲ್ಲಿ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಪತ್ನಿ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ರಂಗಪ್ಪ ಅವರು 1996ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಜೆಡಿಎಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದರು.

1996ರ ಚುನಾವಣೆಯಲ್ಲಿ ಒಟ್ಟು ಜೆಡಿಎಸ್‌ನಿಂದ 16 ಮಂದಿ ಗೆದ್ದಿದ್ದರು. ಅದರಲ್ಲಿ ರಂಗಪ್ಪ ಕೂಡ ಒಬ್ಬರಾಗಿದ್ದರು.
ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ರಂಗಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಜಲಸಂಪನ್ಮೂಲ ಸಚಿವ, ಬಿಜೆಪಿ ಹಿರಿಯ ನಾಯಕ ರಮೇಶ್ ಜಾರಕಿಹೊಳಿ ಸಂತಾಪ ಸೂಚಿಸಿ, ರಂಗಪ್ಪ ಅವರು ಅತ್ಯಂತ ಹಿಂದುಳಿದ ಪ್ರದೇಶವಾದ ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ ಎಂದು ಸ್ಮರಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಸಂತಾಪ:
ರಾಜಕೀಯ ಮನೆತನದ ಹಿನ್ನೆಲೆಯುಳ್ಳ ಜನಪರ ಕಾಳಜಿಯ ಮಾಜಿ ಸಂಸದರಾಗಿದ್ದ ರಾಜಾ ರಂಗಪ್ಪ ನಾಯಕ ಅವರ ನಿಧನದಿಂದಾಗಿ ಓರ್ವ ಉತ್ತಮ ವಾಕ್ಪಟು ಅವರನ್ನು ಕಳೆದುಕೊಂಡಂತಾಗಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಅವರು ಸಂತಾಪ ಸೂಚಿಸಿದ್ದಾರೆ.

ರಾಜಾ ರಂಗಪ್ಪ ನಾಯಕ ಅವರು ಮಾಜಿ ಶಾಸಕ ರಾಜಾ ವೆಂಟಕಪ್ಪ ನಾಯಕ ಅವರ ಸಹೋದರರು ಹಾಗೂ ಮಾಜಿ ಶಾಸಕ ರಾಜಾ ಕುಮಾರ ನಾಯಕ್ ಅವರ ಪುತ್ರರು. ರಾಜಾ ಕುಮಾರ ನಾಯಕ, ರಾಜಾ ವೆಂಕಟಪ್ಪ ನಾಯಕ ಹಾಗೂ ರಾಜಾ ರಂಗಪ್ಪ ನಾಯಕ ಅವರು ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಮಾಜಿ ಕೇಂದ್ರ ಸಚಿವ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಆಪ್ತರಾಗಿದ್ದರು. ಅವರ ಒಡನಾಟ ಹಾಗೂ ಜನಪರ ಕಾಳಜಿಯನ್ನು ನೆನೆಯುತ್ತಾ, ನಿಧನರಾದ ರಾಜಾ ರಂಗಪ್ಪ ನಾಯಕ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಅಗಲಿಕೆ ನೋವು ಮರೆಯುವ ಶಕ್ತಿ ಕುಟುಂಬ ವರ್ಗದವರಿಗೆ ನೀಡುವಂತೆ ಆ ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಶಾಸಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT