ರಾಜ್ಯ

ರಾಜ್ಯ ರಸ್ತೆ ಸಾರಿಗೆ ನೌಕರರ ವೇತನ ಬಿಡುಗಡೆಗೆ ಅಸ್ತು

Lingaraj Badiger

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರ ಏಪ್ರಿಲ್ ಮತ್ತು ಮೇ ತಿಂಗಳ ವೇತನ ಬಿಡುಗಡೆಗೆ ಸರ್ಕಾರ ಅನುಮೋದನೆ ನೀಡಿದೆ.

ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಶ್ರಮ ಮತ್ತು‌ ಸಂಬಂಧಪಟ್ಟವರ ಜೊತೆಗೆ ನಿರಂತರ ಮಾತುಕತೆಯಿಂದ ಸಾರಿಗೆ ನೌಕರರ ಏಪ್ರಿಲ್ ಮತ್ತು‌ ಮೇ ತಿಂಗಳ ವೇತನ ಸರ್ಕಾರದಿಂದ ಬಿಡುಗಡೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕಳೆದ ಎರಡು ತಿಂಗಳುಗಳಿಂದ ಸಾರಿಗೆ ನಿಗಮಗಳಲ್ಲಿ ಯಾವುದೇ ಬಸ್ ಕಾರ್ಯಚರಣೆ ಆಗದೆ , ನಿಗಮಗಳ ಆದಾಯ ಸಂಪೂರ್ಣ ನಿಂತು ಹೋಗಿದೆ. ವೇತನ ನೀಡಲೂ ಹಣವಿಲ್ಲದಂತಹ ಸ್ಥಿತಿಯಲ್ಲಿದ್ದ ಸಾರಿಗೆ ನಿಗಮಗಳಿಗೆ, ಇದೇ‌ ಮೊದಲ ಬಾರಿಗೆ ಸಾರಿಗೆ ನಿಗಮಗಳ ಇತಿಹಾಸದಲ್ಲಿ, ಸರ್ಕಾರವು ಸಾರಿಗೆ ನಿಗಮಗಳ ಸಿಬ್ಬಂದಿಗಳ ವೇತನಕ್ಕೆ ಹಣ ಬಿಡುಗಡೆ ಮಾಡಿದೆ.

ಈ ಸಂಬಂಧ ಮುಖ್ಯಮಂತ್ರಿಗಳೊಡನೆ, ನಿರಂತರ ಮಾತುಕತೆ ನಡೆಸಿ, ಪರಿಸ್ಥಿತಿಯನ್ನು ವಿವರಿಸಿ, ವೇತನಕ್ಕೆ ಹಣವನ್ನು ಬಿಡುಗಡೆಗೊಳಿಸಲು ಕಾರಣರಾದ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಚಿವರು ಧನ್ಯವಾದ ಸಲ್ಲಿಸಿದ್ದಾರೆ.

SCROLL FOR NEXT