ಆರ್.ಅಶೋಕ್ 
ರಾಜ್ಯ

ಸದ್ಯಕ್ಕೆ ಸಿನಿಮಾ ಚಿತ್ರೀಕರಣ ಬೇಡ: ಆರ್. ಅಶೋಕ್

ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಸಿನಿಮಾನಗಳ ಚಿತ್ರೀಕರಣ ನಡೆಸುವುದು ಬೇಡ ಎಂದು ಕಂದಾಯ ಸಚಿವ ಆರ್. ಅಶೋಕ ಸಲಹೆ ನೀಡಿದ್ದಾರೆ.  

ಬೆಂಗಳೂರು: ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಸಿನಿಮಾನಗಳ ಚಿತ್ರೀಕರಣ ನಡೆಸುವುದು ಬೇಡ ಎಂದು ಕಂದಾಯ ಸಚಿವ ಆರ್. ಅಶೋಕ ಸಲಹೆ ನೀಡಿದ್ದಾರೆ. 

ಇತ್ತೀಚೆಗೆ ಕನ್ನಡ ‌ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಪ್ರವೀಣ್ ಕುಮಾರ್ , ಉಪಾಧ್ಯಕ್ಷ ಎಂ.ಜಿ.ರಾಮಮೂರ್ತಿ, ಕಾರ್ಯದರ್ಶಿ ಕೆ.ಮಂಜು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಾರ್ಯದರ್ಶಿ ಎ.ಗಣೇಶ್ , ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟದ ಉಪಾಧ್ಯಕ್ಷ ರವಿಶಂಕರ್ ಅವರ‌ ತಂಡ ಸಚಿವರನ್ನು ಭೇಟಿ ಮಾಡಿತ್ತು. 

ಈ‌ ಸಂದರ್ಭದಲ್ಲಿ ಮಾತನಾಡಿದ ಆರ್.ಅಶೋಕ, ಚಿತ್ರೀಕರಣಕ್ಕೆ ‌ಈ‌‌ ಸದ್ಯ ಅನುಮತಿ ‌ನೀಡಲು ಸಾಧ್ಯವಿಲ್ಲ. ಆದರೆ ಡಬ್ಬಿಂಗ್, ಎಡಿಟಿಂಗ್, ಗ್ರಾಫಿಕ್ಸ್, ರೀರೆಕಾರ್ಡಿಂಗ್ ಮುಂತಾದ ಚಟುವಟಿಕೆಗಳನ್ನು ಸರ್ಕಾರದ ಆದೇಶ‌ ಹಾಗೂ ಕೊರೋನಾ ನಿವಾರಣೆಗೆ ಇರುವ ನಿಯಮಗಳನ್ನು ಪಾಲಿಸಿ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ..

ಚಿತ್ರೀಕರಣ ಬಿಟ್ಟು ಬೇರೆ ಚಟುವಟಿಕೆಗಳನ್ನು ಮಾಡಿಕೊಳ್ಳಲು ಅನುವು ಮಾಡಿಕೊಟ್ಟಿರುವ ರಾಜ್ಯಸರ್ಕಾರಕ್ಕೆ ವಿಶೇಷವಾಗಿ ಸಚಿವ ಆರ್ ಅಶೋಕ್ ಅವರಿಗೆ ಮತ್ತು ಮುಖ್ಯ ಮಂತ್ರಿ ಯಡಿಯೂರಪ್ಪ ಅವರಿಗೆ ಪ್ರವೀಣ್ ಕುಮಾರ್ ಅವರು ಧನ್ಯವಾದ ತಿಳಿಸಿದ್ದಾರೆ.. 

ಸರ್ಕಾರದ ನಿಯಮಗಳನ್ನು ಪಾಲಿಸಿ‌ ಚಿತ್ರೀಕರಣ ಬಿಟ್ಟು ಉಳಿದ ಚಟುವಟಿಕೆಗಳನ್ನು ಮಾಡಿಕೊಳುವಂತೆ ಕನ್ನಡ ಚಿತ್ರ ನಿರ್ಮಾಪಕರಿಗೆ ಹಾಗು ತಂತ್ರಜ್ಞರಿಗೆ ಅಧ್ಯಕ್ಷ ಪ್ರವೀಣ್ ಕುಮಾರ್ ಮನವಿ ಮಾಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel