ಆರ್.ಅಶೋಕ್ 
ರಾಜ್ಯ

ಸದ್ಯಕ್ಕೆ ಸಿನಿಮಾ ಚಿತ್ರೀಕರಣ ಬೇಡ: ಆರ್. ಅಶೋಕ್

ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಸಿನಿಮಾನಗಳ ಚಿತ್ರೀಕರಣ ನಡೆಸುವುದು ಬೇಡ ಎಂದು ಕಂದಾಯ ಸಚಿವ ಆರ್. ಅಶೋಕ ಸಲಹೆ ನೀಡಿದ್ದಾರೆ.  

ಬೆಂಗಳೂರು: ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಸಿನಿಮಾನಗಳ ಚಿತ್ರೀಕರಣ ನಡೆಸುವುದು ಬೇಡ ಎಂದು ಕಂದಾಯ ಸಚಿವ ಆರ್. ಅಶೋಕ ಸಲಹೆ ನೀಡಿದ್ದಾರೆ. 

ಇತ್ತೀಚೆಗೆ ಕನ್ನಡ ‌ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಪ್ರವೀಣ್ ಕುಮಾರ್ , ಉಪಾಧ್ಯಕ್ಷ ಎಂ.ಜಿ.ರಾಮಮೂರ್ತಿ, ಕಾರ್ಯದರ್ಶಿ ಕೆ.ಮಂಜು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಾರ್ಯದರ್ಶಿ ಎ.ಗಣೇಶ್ , ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟದ ಉಪಾಧ್ಯಕ್ಷ ರವಿಶಂಕರ್ ಅವರ‌ ತಂಡ ಸಚಿವರನ್ನು ಭೇಟಿ ಮಾಡಿತ್ತು. 

ಈ‌ ಸಂದರ್ಭದಲ್ಲಿ ಮಾತನಾಡಿದ ಆರ್.ಅಶೋಕ, ಚಿತ್ರೀಕರಣಕ್ಕೆ ‌ಈ‌‌ ಸದ್ಯ ಅನುಮತಿ ‌ನೀಡಲು ಸಾಧ್ಯವಿಲ್ಲ. ಆದರೆ ಡಬ್ಬಿಂಗ್, ಎಡಿಟಿಂಗ್, ಗ್ರಾಫಿಕ್ಸ್, ರೀರೆಕಾರ್ಡಿಂಗ್ ಮುಂತಾದ ಚಟುವಟಿಕೆಗಳನ್ನು ಸರ್ಕಾರದ ಆದೇಶ‌ ಹಾಗೂ ಕೊರೋನಾ ನಿವಾರಣೆಗೆ ಇರುವ ನಿಯಮಗಳನ್ನು ಪಾಲಿಸಿ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ..

ಚಿತ್ರೀಕರಣ ಬಿಟ್ಟು ಬೇರೆ ಚಟುವಟಿಕೆಗಳನ್ನು ಮಾಡಿಕೊಳ್ಳಲು ಅನುವು ಮಾಡಿಕೊಟ್ಟಿರುವ ರಾಜ್ಯಸರ್ಕಾರಕ್ಕೆ ವಿಶೇಷವಾಗಿ ಸಚಿವ ಆರ್ ಅಶೋಕ್ ಅವರಿಗೆ ಮತ್ತು ಮುಖ್ಯ ಮಂತ್ರಿ ಯಡಿಯೂರಪ್ಪ ಅವರಿಗೆ ಪ್ರವೀಣ್ ಕುಮಾರ್ ಅವರು ಧನ್ಯವಾದ ತಿಳಿಸಿದ್ದಾರೆ.. 

ಸರ್ಕಾರದ ನಿಯಮಗಳನ್ನು ಪಾಲಿಸಿ‌ ಚಿತ್ರೀಕರಣ ಬಿಟ್ಟು ಉಳಿದ ಚಟುವಟಿಕೆಗಳನ್ನು ಮಾಡಿಕೊಳುವಂತೆ ಕನ್ನಡ ಚಿತ್ರ ನಿರ್ಮಾಪಕರಿಗೆ ಹಾಗು ತಂತ್ರಜ್ಞರಿಗೆ ಅಧ್ಯಕ್ಷ ಪ್ರವೀಣ್ ಕುಮಾರ್ ಮನವಿ ಮಾಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT