ಗಡಿಯಲ್ಲಿ ಕಾಯುತ್ತಿರುವ ವಲಸೆ ಕಾರ್ಮಿಕರು 
ರಾಜ್ಯ

ಕೊರೋನಾ ಲಾಕ್ ಡೌನ್: ಕರ್ನಾಟಕದ ವಲಸೆ ಕಾರ್ಮಿಕರಿಗೆ ಗಡಿಯಲ್ಲಿ ಅಡಚಣೆ

ನಮ್ಮ ಮನೆಗಳಿಗೆ ಹಿಂತಿರುಗಲು ದಾಖಲೆಗಳು ಮತ್ತು ಮಾಹಿತಿಯನ್ನು ಪರಿಶೀಲಿಸಲು ಸಾಧ್ಯವಾಗದಿದ್ದರೆ, ದಯವಿಟ್ಟು ನಮ್ಮ ಕೈಯಲ್ಲಿರುವ ಮುದ್ರೆಯನ್ನು ಅಳಿಸಿಹಾಕಿ ಮತ್ತು ದಾಖಲೆಗಳನ್ನು ಹಿಂತಿರುಗಿಸಿ, ಸಂತೋಷವಾಗಿ ನಾವು ವಾಪಸ್ ಮುಂಬೈಗೆ ಹೋಗುತ್ತೇವೆ ಎಂದು ವಲಸಿಗ ದಂಪತಿ ಕರ್ನಾಟಕದ ಗಡಿಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಕಲಬುರಗಿ: ನಮ್ಮ ಮನೆಗಳಿಗೆ ಹಿಂತಿರುಗಲು ದಾಖಲೆಗಳು ಮತ್ತು ಮಾಹಿತಿಯನ್ನು ಪರಿಶೀಲಿಸಲು ಸಾಧ್ಯವಾಗದಿದ್ದರೆ, ದಯವಿಟ್ಟು ನಮ್ಮ ಕೈಯಲ್ಲಿರುವ ಮುದ್ರೆಯನ್ನು ಅಳಿಸಿಹಾಕಿ ಮತ್ತು ದಾಖಲೆಗಳನ್ನು ಹಿಂತಿರುಗಿಸಿ, ಸಂತೋಷವಾಗಿ ನಾವು ವಾಪಸ್ ಮುಂಬೈಗೆ ಹೋಗುತ್ತೇವೆ ಎಂದು ವಲಸಿಗ ದಂಪತಿ ಕರ್ನಾಟಕದ ಗಡಿಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ವಲಸೆ ಕಾರ್ಮಿಕರನ್ನು ಗಡಿಯಲ್ಲಿ ತಡೆದು ಅವರ ದಾಖಲಾತಿ ಮೊದಲಾದ ಮಾಹಿತಿಗಳನ್ನು ಚೆಕ್ ಪೋಸ್ಟ್ ನಲ್ಲಿ ಕಲೆ ಹಾಕುತ್ತಿದ್ದಾರೆ. ಮುಂಬೈ ಮತ್ತು ಪುಣೆಯಿಂದ ಆಗಮಿಸಿರುವ ವಲಸೆ ಕಾರ್ಮಿಕರನ್ನು  ಕಳುಹಿಸಲು ಮಹಾರಾಷ್ಟ್ರ- ಕರ್ನಾಟಕ ಗಡಿಯಲ್ಲಿ ದಾಖಲೆ ಪರಿಶೀಲಿಸಲಾಯಿತು.

ಸೇವಾ ಸಿಂಧು ಆ್ಯಪ್‌ನಲ್ಲಿ ವಿವರಗಳನ್ನು ಅಪ್‌ಲೋಡ್ ಮಾಡಲು ಸಿಬ್ಬಂದಿ ಆಧಾರ್ ಕಾರ್ಡ್‌ನಂತಹ ದಾಖಲೆಗಳನ್ನು ಸಂಗ್ರಹಿಸುತ್ತಿದ್ದಾರೆ. ಕಳೆದ ಮೂರು ದಿನಗಳಲ್ಲಿ ಇಂತಹ 3 ಸಾವಿರ ಕಾರ್ಮಿಕರು ಗಡಿಗೆ ಬಂದಿದ್ದು, ಮನೆಗೆ ಮರಳಲು ಹಂಬಲಿಸುತ್ತಿದ್ದಾರೆ.

ಮಹಾರಾಷ್ಟ್ರ ಪುಣೆಯಿಂದ, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ವಾಪಸ್ ಬರುತ್ತಿರುವ ವಲಸೆ ಕಾರ್ಮಿಕರನ್ನು  ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಹಿರೋಳಿ ಗ್ರಾಮದಲ್ಲಿ ದಾಖಲಾತಿ ಪರಿಶೀಲನೆ ನಡೆಸಲಾಗುತ್ತಿದೆ. ಆದರೆ  ಅಧಿಕಾರಿಗಳು ಮತ್ತು ಬಸ್ ಗಳ ಕೊರತೆಯಿಂದಾಗಿ ವಲಸೆ ಕಾರ್ಮಿಕರು ಶೀಘ್ರವಾಗಿ ತಮ್ಮ ತಮ್ಮ  ಮನೆಗಳಿಗೆ ತೆರಳಲು
ಸಾಧ್ಯವಾಗುತ್ತಿಲ್ಲ,

ಲಾಕ್ ಡೌನ್ ಆರಂಭವಾದಾಗಿನಿಂದ ಊಟಕ್ಕೆ ಪರದಾಡುತ್ತಿರುವ ಈವಲಸೆ ಕಾರ್ಮಿಕರು ತಮ್ಮ ಮನೆಗಳಿಗೆ ತೆರಳಲು ಹಂಬಲಿಸುತ್ತಿದ್ದಾರೆ, ಆದರೆ ಗಡಿಯಲ್ಲಿನ ಕೆಲವು ತೊಂದರೆಗಳಿಂದಾಗಿ  ಸಾಧ್ಯವಾಗುತ್ತಿಲ್ಲ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT