ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರಿನ ರೈತರಿಗೆ ಲಾಕ್ ಡೌನ್ ಎಫೆಕ್ಟ್: ನೀರಿಲ್ಲದೇ ಒಣಗಿದ ಬೆಳೆಗಳು

ಲಾಕ್ ಡೌನ್ ಹಿನ್ನೆಲೆಯಿಂದಾಗಿ ಕಬಿನಿ ಅಚ್ಚುಕಟ್ಟು ಪ್ರದೇಶದ ರೈತರ ಬೆಳೆಗಳು ಹಾಳಾಗಿವೆ. ಆದರೂ, ಕಬಿನಿ ಜಲಾಶಯದಲ್ಲಿ ಸಾಕಷ್ಟು ನೀರು ಇದೆ. ಮಳೆಗಾಲದಲ್ಲಿ ನಿರಂತರ ಮಳೆಯಿಂದಾಗಿ ಕೃಷಿ ಸಮುದಾಯದಲ್ಲಿ ಭರವಸೆಯನ್ನು ಹುಟ್ಟುಹಾಕಿತ್ತು ಕೊರೋನಾದಿಂದಾಗಿ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿವೆ.

ಮೈಸೂರು: ಲಾಕ್ ಡೌನ್ ಹಿನ್ನೆಲೆಯಿಂದಾಗಿ ಕಬಿನಿ ಅಚ್ಚುಕಟ್ಟು ಪ್ರದೇಶದ ರೈತರ ಬೆಳೆಗಳು ಹಾಳಾಗಿವೆ. ಆದರೂ, ಕಬಿನಿ ಜಲಾಶಯದಲ್ಲಿ ಸಾಕಷ್ಟು ನೀರು ಇದೆ. ಮಳೆಗಾಲದಲ್ಲಿ ನಿರಂತರ ಮಳೆಯಿಂದಾಗಿ ಕೃಷಿ ಸಮುದಾಯದಲ್ಲಿ ಭರವಸೆಯನ್ನು ಹುಟ್ಟುಹಾಕಿತ್ತು ಕೊರೋನಾದಿಂದಾಗಿ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿವೆ.

ಬೆಳೆಗಳಿಗೆ ನೀರು ಹಾಯಿಸುವುದಾಗಿ ನೀರಾವರಿ ಅಧಿಕಾರಿಗಳು ಭರವಸೆ ನೀಡಿದ್ದರು, ಆದರೆ ಪ್ರಸಕ್ತ ಇರುವ ಸನ್ನಿವೇಶದಿಂದಾಗಿ  ಸಾಧ್ಯವಾಗುತ್ತಿಲ್ಲ, ತಮ್ಮ ಬೆಳೆಗಳಿಗೆ ನೀರು ಸಿಗಲಿದೆ ಎಂದು ರೈತರು ಸಂತೋಷದಿಂದಿದ್ದರು, ಹೀಗಾಗಿ ಜೋಳ, ಹೆಸರುಕಾಳು,ರಾಗಿ ಮುಂತಾದ ಕಾಳುಗಳನ್ನು ಬಿತ್ತನೆ ಮಾಡಿದ್ದರು, ಸುಮಾರು 50 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮಾಡಿದ್ದರು,

ಈ ಪ್ರದೇಶದಲ್ಲಿ ಪೂರ್ವ ಮುಂಗಾರು ಮಳೆಯಾಗಿದ್ದರಿಂದ ಪಡೆದಿದ್ದರಿಂದ ಕೃಷಿ ಚಟುವಟಿಕೆಗಳು ವೇಗವನ್ನು ಪಡೆದುಕೊಂಡಿದ್ದವು. ಆದರೆ ಫೆಬ್ರವರಿಯಲ್ಲಿ 15 ದಿನಗಳ ಕಾಲ ನೀರನ್ನು ಬಿಡುಗಡೆ ಮಾಡಿದ ಜಲಸಂಪನ್ಮೂಲ ಇಲಾಖೆ, ಮಾರ್ಚ್‌ನಲ್ಲಿ ಹಾಗೆ ಮಾಡದ ಕಾರಣ, ಬೆಳೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ಕಬಿನಿ ಜಲಾಶದಿಂದ ನೀರು ಹರಿಸದ ಕಾರಣ ನಾವು ಬೆಳೆದಿದ್ದ ಜೋಳದ ಬೆಳೆ ಒಣಗಿ ಹೋಗಿದೆ ಎಂದು ರೈತರು ಹೇಳಿದ್ದಾರೆ. ಬೇಸಿಗೆ ಬೆಳೆಗಳಿಗೆ ನೀರು ಹರಿಸಲು ನಮಗೆ ಅನುಮತಿ ಸಿಕ್ಕಿಲ್ಲ  ಎಂದು ಮುಖ್ಯ ಅಭಿಯಂತರ ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT