ಗೋಪಾಲಯ್ಯ 
ರಾಜ್ಯ

ಪಡಿತರ ಅಕ್ರಮ: 33 ಅಂಗಡಿಗಳ ಲೈಸೆನ್ಸ್ ರದ್ದು

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪಡಿತರ ವಿತರಿಸುತ್ತಿರುವ ಆಹಾರ ಧಾನ್ಯಗಳನ್ನು ಅಕ್ರಮ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಹಾರ ಸಚಿವ ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪಡಿತರ ವಿತರಿಸುತ್ತಿರುವ ಆಹಾರ ಧಾನ್ಯಗಳನ್ನು ಅಕ್ರಮ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಹಾರ ಸಚಿವ ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ.

ಬಡವರಿಗೆ ನೀಡುತ್ತಿರುವ ಪಡಿತರ ವಿತರಣೆಯನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಿರುವ ದೂರು ಬಂದಿದೆ. ಸರ್ಕಾರ ಉಚಿತವಾಗಿ ವಿತರಿಸುತ್ತಿರುವ ಅಕ್ಕಿವನ್ನು ಕೆ.ಜಿಗೆ 12ರಿಂದ 15 ರೂಗಳಿಗೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.

ಬಡವರಿಗೆ ಕೋಟ್ಯಂತರ ರೂ. ವ್ಯಯ ಮಾಡಿ ಸರ್ಕಾರ ಪಡಿತರ ಒದಗಿಸುತ್ತಿದೆ. ಆದರೆ ಇದನ್ನು ದುರ್ಬಳಕೆ ಮಾಡಿಕೊಳ್ಳುವುದು ತಪ್ಪು. ದುರ್ಬಳಕೆ ತಡೆಯಲು ಕಾನೂನು ಜಾರಿ ಮಾಡುವ ಸಂಬಂಧ ಮುಖ್ಯ ಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದರು. 

ಪಡಿತರ ಬೇಡ ಎಂದರೆ ಅದನ್ನು ಅಂಗಡಿಯಲ್ಲೇ ಬಿಟ್ಟುಬಿಡಿ ಅದರಿಂದ ಬಡವರಿಗೆ ಅನುಕೂಲವಾಗುತ್ತದೆ. ಅದು ಬಿಟ್ಟು ಉಚಿತವಾಗಿ ಪಡಿತರ ಪಡೆದು ಅದನ್ನು ಮಾರಾಟ ಮಾಡುವುದು ಸರಿಯಲ್ಲ. ಇಂತಹವರ ಪಡಿತರ ಚೀಟಿಯನ್ನ ರದ್ದು ಮಾಡುವುದಾಗಿಯೂ ಅವರು ಎಚ್ಚರಿಕೆ ನೀಡಿದರು.

ಪಡಿತರ ದುರ್ಬಳಕೆ ಮಾಡಿಕೊಂಡಿರುವ 499 ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ. 33 ಅಂಗಡಿಗಳ ಲೈಸೆನ್ಸ್ ರದ್ದು ಮಾಡಿದ್ದೇವೆ ಎಂದು ಸಚಿವರು ಹೇಳಿದರು. ಇನ್ನು ಗುಲ್ಬರ್ಗ, ಮೈಸೂರು ಮತ್ತು ದಾವಣಗೆರೆ ಖಾಸಗಿ ಗೋದಾಮುಗಳ ಮೇಲೆ ನಮ್ಮ ಇಲಾಖೆ ಅಧಿಕಾರಿಗಳು, ಮತ್ತು ಪೊಲೀಸರು ದಾಳಿ ನಡೆಸಲಾಗಿದೆ. 

ಸಾವಿರಾರು ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಇದು ನಮ್ಮ ಸರಕಾರದ ಅಕ್ಕಿಯೋ ಇಥವಾ ಬೇರೆ ರಾಜ್ಯದ ಅಕ್ಕಿ ಎಂದು ತನಿಖೆ ನಡೆಸಲು, ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಿಯಾಗಳಾಗಿದ್ದರೂ ಚಿಂತಿಸುವುದಿಲ್ಲ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಸಚಿವರು ಎಚ್ಚರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್

ಪಾಕ್ ಉಗ್ರರ ರಣಬೇಟೆ: ಬಲೂಚಿಸ್ತಾನದಲ್ಲಿ 88 ಭಯೋತ್ಪಾದಕರ ಹತ್ಯೆ!

'10 Snakes' ಪೋಸ್ಟ್ ಗೆ ಶ್ರೇಷ್ಠ ಅಯ್ಯರ್‌ ಲೈಕ್, ಭಾರಿ ವಿವಾದಕ್ಕೆ ಗುರಿಯಾದ ಶ್ರೇಯಸ್ ಅಯ್ಯರ್! ನೆಟ್ಟಿಗರು ತೀವ್ರ ಚರ್ಚೆ

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video