ಸಂಸದ ಡಾ.ಉಮೇಶ್ ಜಾಧವ್ 
ರಾಜ್ಯ

ಕಲಬುರಗಿ: ಬಸ್ ವ್ಯವಸ್ಥೆ ಮಾಡಿ ಅತಂತ್ರ ವಲಸಿಗರಿಗೆ ನೆರವಾದ ಸಂಸದ ಉಮೇಶ್ ಜಾಧವ್

ಸೋಮವಾರ ಮುಂಬೈನ ಥಾಣೆಯಿಂದ ಕಲಬುರಗಿಗೆ ಹೊರಟ "ಶ್ರಮಿಕ್" ವಿಶೇಷ ರೈಲು ಭರ್ತಿಯಾಗಿದ್ದರಿಂದ ಇನ್ನೂ ಒಂದು ಸಾವಿರಕ್ಕೂ ಹೆಚ್ಚು ವಲಸಿಗರು ಅತಂತ್ರರಾಗಿದ್ದರು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಲಬುರಗಿ ಲೋಕಸಭಾ ಸದಸ್ಯ ಡಾ.ಉಮೇಶ್ ಜಾಧವ್ ಅವರು ಬಸ್ಸು ಗಳ ವ್ಯವಸ್ಥೆ ಮಾಡಿ,ಈ ವಲಸಿಗರನ್ನು ಅವರವರ ಊರು ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಕಲಬುರಗಿ: ಸೋಮವಾರ ಮುಂಬೈನ ಥಾಣೆಯಿಂದ ಕಲಬುರಗಿಗೆ ಹೊರಟ "ಶ್ರಮಿಕ್" ವಿಶೇಷ ರೈಲು ಭರ್ತಿಯಾಗಿದ್ದರಿಂದ ಇನ್ನೂ ಒಂದು ಸಾವಿರಕ್ಕೂ ಹೆಚ್ಚು ವಲಸಿಗರು ಅತಂತ್ರರಾಗಿದ್ದರು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಲಬುರಗಿ ಲೋಕಸಭಾ ಸದಸ್ಯ ಡಾ.ಉಮೇಶ್ ಜಾಧವ್ ಅವರು ಬಸ್ಸು ಗಳ ವ್ಯವಸ್ಥೆ ಮಾಡಿ,ಈ ವಲಸಿಗರನ್ನು ಅವರವರ ಊರು ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

1,230 ಜನ ಥಾಣೆಗೆ ಬಂದು ರೈಲು ಏರಿದರು. ಆದರೆ, ರೈಲು ಭರ್ತಿಯಾಗಿ ಸೀಟು ಸಿಗದೆ ಅತಂತ್ರರಾದ ಜನ ಕರೆಮಾಡಿದರು.ತಕ್ಷಣ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್ಇಕೆಆರ್ ಸಿ)ಯ ಬಸ್ಸು ಗಳು ಸೇರಿ 10 ವಾಹನಗಳ ವ್ಯವಸ್ಥೆ ಮಾಡಲಾಯಿತು. ಇದರಿಂದಾಗಿ ಸಾವಿರಾರು ವಲಸಿಗರು ತಮ್ಮ ಊರು ಸೇರುವಂತಾಯಿತು ಎಂದು ಸಂಸದ ಉಮೇಶ್ ಜಾಧವ್ ತಿಳಿಸಿದ್ದಾರೆ.

ಲಾರಿ ಸೇರಿದಂತೆ ಖಾಸಗಿ ವಾಹನಗಳ ಮೂಲಕವೂ ನೂರಾರು ಜನರು ಮುಂಬೈನಿಂದ ತವರು ಜಿಲ್ಲೆಗೆ ಬಂದಿದ್ದಾರೆ.
ಲಾರಿ (ದೊಡ್ಡ ಗೂಡ್ಸ್)ಯಲ್ಲಿ ಸುಮಾರು 50 ವಲಸಿಗರು ಇಂದು ಮಧ್ಯಾಹ್ನ ಅಫಜಲಪುರ ತಾಲ್ಲೂಕಿನ ಚೌಡಾಪುರ ಕ್ರಾಸ್ ಗೆ ಬಂದಿಳಿದರು.

ಇವರು ಲಾರಿ ಚಾಲಕನಿಗೆ ಕೇವಲ 20 ಸಾವಿರ ರೂಪಾಯಿ ಮುಂಗಡ ಹಣವನ್ನಷ್ಟೆ ಪಾವತಿಸಲು ಶಕ್ತರಾಗಿದ್ದರು. ಈ ವಿಷಯ ತಿಳಿದು ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ನಿತೀನ್ ಗುತ್ತೇದಾರ್ ಕೂಡಿ ಚೌಡಾಪುರ ಕ್ರಾಸ್ ತಲುಪಿದೆವು. ಚೌಡಾಪುರಕ್ಕೆ ಬಂದ ಮೇಲೆ ಸಂಕಷ್ಟದಲ್ಲಿದ್ದ ವಲಸಿಗರ ಕಂಡು ಮರುಗಿದ ನಿತೀನ್ ಗುತ್ತೇದಾರ್ ಅವರು ಉಳಿದ ಬಾಕಿ ಹಣ 40ಸಾವಿರ ರೂಪಾಯಿ ಯನ್ನು ಲಾರಿ ಚಾಲಕನಿಗೆ ಕೊಟ್ಟು ವಾಪಸ್ ಕಳುಹಿಸಿದರು. ಈ ಮೂಲಕ ನಿತೀನ್ ಅವರು ಕಷ್ಟದಲ್ಲಿದ್ದ ಶ್ರಮಿಕ ಜೀವಿಗಳ ಕೈಹಿಡಿದಿದ್ದಾರೆ.

 ಮುಂಬೈನಿಂದ ಚೌಡಾಪುರಕ್ಕೆ ಬಂದ ಎಲ್ಲಾ ವಲಸಿಗರಿಗೂ ಕೊರೊನಾ ವೈರಸ್ ಸೋಂಕು ಪತ್ತೆಯ ಆರೋಗ್ಯ ತಪಾಸಣೆ ನಡೆಸಲಾಗಿದೆ.ಇನ್ನು, ಚೌಡಾಪುರದಿಂದ ಯಾದಗಿರಿ ಜಿಲ್ಲೆಯ ಗುರುಮಠಕಲ್ ಗೆ ಬಸ್ಸು ವ್ಯವಸ್ಥೆ ಮಾಡಿ, ಈ ವಲಸಿಗರನ್ನು ಕಳುಹಿಸಿಕೊಡಲಾಗಿದೆ ಎಂದು ಜಾಧವ್ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು ಹಾಗೂ ಅಫಜಲಪುರ ತಹಸೀಲ್ದಾರ್ ಅವರೊಂದಿಗೆ ಮಾತನಾಡಿ, ಬಸ್ ನಲ್ಲಿ ಎಲ್ಲಾ ಸುರಕ್ಷತಾ ಕ್ರಮಕೈಗೊಂಡು ಈ ಶ್ರಮಿಕ ವರ್ಗದವರನ್ನು ಗುರುಮಠಕಲ್ ಗೆ ಕಳುಹಿಸಿ ಕೊಡಲಾಗಿದೆ ಎಂದು ವಿವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT