ಸಾಂದರ್ಭಿಕ ಚಿತ್ರ 
ರಾಜ್ಯ

ಬಿಬಿಎಂಪಿ ಸದಸ್ಯೆಯ ಪತಿ ಮೇಲೆ ಸಗಣಿ ಎರಚಿದ ಕಿಡಿಗೇಡಿಗಳು

ಬಿಬಿಎಂಪಿ ಸದಸ್ಯೆಯ ಪತಿ ಮತ್ತು ಮಗನ ಮೇಲೆ ಕೆಲ ಕಿಡಿಗೇಡಿಗಳು ಸಗಣಿ ಎರಚಿರುವ ಘಟನೆ ನಗರದ ಕಲಾಸಿಪಾಳ್ಯದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.

ಬೆಂಗಳೂರು: ಬಿಬಿಎಂಪಿ ಸದಸ್ಯೆಯ ಪತಿ ಮತ್ತು ಮಗನ ಮೇಲೆ ಕೆಲ ಕಿಡಿಗೇಡಿಗಳು ಸಗಣಿ ಎರಚಿರುವ ಘಟನೆ ನಗರದ ಕಲಾಸಿಪಾಳ್ಯದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.

ಕಲಾಸಿಪಾಳ್ಯ ವಾರ್ಡ್ ಸದಸ್ಯೆ ಪ್ರತಿಭಾ ಧನರಾಜ್ ಅವರ ಪತಿ ಧನರಾಜ್ ಮತ್ತು ಪುತ್ರನ ಮೇಲೆ ಸಗಣಿ ಎರಚಲಾಗಿದ್ದು, ಕಿಡಿಗೇಡಿಗಳು ಮೊದಲೇ ಸಗಣಿ ಪ್ಯಾಕೆಟ್ ತಯಾರಿಸಿಕೊಂಡಿದ್ದರು‌ ಎಂದು ಆರೋಪಿಸಲಾಗಿದೆ. ಕಲಾಸಿಪಾಳ್ಯದಲ್ಲಿ ಅಕ್ರಮವಾಗಿ ಅಂಗಡಿಗಳನ್ನು ಹಾಕಲಾಗಿದೆ  ಎಂಬ ಕಾರಣಕ್ಕೆ ಬಿಬಿಎಂಪಿ ಅಧಿಕಾರಿಗಳ ಜೊತೆ ಧನರಾಜ್ ತಪಾಸಣೆ‌ ನಡೆಸುತ್ತಿದ್ದಾಗ ಈ ವೇಳೆ ಘಟನೆ ನಡೆದಿದೆ.

ಧನರಾಜ್ ಅವರು ವಾರ್ಡ್ ಸದಸ್ಯರಲ್ಲ. ಹೀಗಿರುವಾಗ ಅವರೇಕೆ ತಪಾಸಣೆ ಮಾಡಲು ಬರಬೇಕು? ಅವರಿಗೇನು ಅಧಿಕಾರವಿದೆ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಸಗಣಿ ಎಸೆದ ಕಾರಣಕ್ಕೆ ಪಾಲಿಕೆ ಸದಸ್ಯೆ ಪ್ರತಿಭಾ ಹಾಗೂ ಅವರ ಬೆಂಬಲಿಗರು ಕಲಾಸಿಪಾಳ್ಯ ರಸ್ತೆಯಲ್ಲಿ‌ ಕುಳಿತು  ಪ್ರತಿಭಟನೆ ನಡೆಸಿದ್ದಾರೆ.

ಇನ್ನು, ಇದೇ ವೇಳೆ ಗುಂಪೊಂದು ಧನರಾಜ್ ವಿರುದ್ಧ ಧಿಕ್ಕಾರ ಕೂಗುತ್ತಾ ಬಂದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪ್ರತಿಭಟನಕಾರರನ್ನು ನಿಯಂತ್ರಿಸಲು ಕಲಾಸಿಪಾಳ್ಯ ಠಾಣೆಯ ಪೊಲೀಸರು ಹರಸಾಹಸ ಪಡಬೇಕಾಯಿತು. ಬಳಿಕ ಪೊಲೀಸರು ಎಲ್ಲರನ್ನೂ  ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT