ದುಬೈನಿಂದ ಆಗಮಿಸಿದ ಕನ್ನಡಿಗರು 
ರಾಜ್ಯ

ವಂದೇ ಭಾರತ್ ಮಿಷನ್ : ದುಬೈನಿಂದ ಮಂಗಳೂರಿಗೆ ಆಗಮಿಸಿದ 177 ಕನ್ನಡಿಗರು

ಕೋವಿಡ್ 19 ಕಾರಣದಿಂದ ದುಬೈನಲ್ಲಿ ಸಿಲುಕಿಕೊಂಡಿದ್ದ 177 ಕನ್ನಡಿಗರನ್ನು ಒಳಗೊಂಡ ವಿಮಾನ ಮಂಗಳವಾರ ತಡರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದೆ.

ಮಂಗಳೂರು: ಕೋವಿಡ್ 19 ಕಾರಣದಿಂದ ದುಬೈನಲ್ಲಿ ಸಿಲುಕಿಕೊಂಡಿದ್ದ 177 ಕನ್ನಡಿಗರನ್ನು ಒಳಗೊಂಡ ವಿಮಾನ ಮಂಗಳವಾರ ತಡರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದೆ.

ಈ ಮೂಲಕ ವಿದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ತಾಯ್ನಾಡಿಗೆ ಏರ್‌ಲಿಫ್ಟ್‌ ಮಾಡುವ ಬಹುನಿರೀಕ್ಷಿತ ‘ವಂದೇ ಭಾರತ್‌’ ಯೋಜನೆಯಡಿ ಮಂಗಳೂರಿಗೆ ಮೊದಲ ವಿಮಾನ ಆಗಮಿಸಿದಂತಾಗಿದೆ.

ದ.ಕ. ಜಿಲ್ಲೆಯ 96, ಉಡುಪಿ ಜಿಲ್ಲೆಯ 49 ಹಾಗೂ ಇತರ ಜಿಲ್ಲೆಗಳ 31 ಪ್ರಯಾಣಿಕರಿದ್ದರು. ಅವರಲ್ಲಿ 38 ಗರ್ಭಿಣಿಯರು, ವೈದ್ಯಕೀಯ ಚಿಕಿತ್ಸೆ ಪಡೆಯುವ ನಿರೀಕ್ಷೆಯಲ್ಲಿರುವವರು, ದುಬೈಯಲ್ಲಿ ಕೆಲಸ ಕಳೆದುಕೊಂಡವರು, ವೀಸಾ ಅವಧಿ ಮುಗಿದವರು, ಕುಟುಂಬ ಮೆಡಿಕಲ್‌ ಅಗತ್ಯ ಇರುವವರು, ಪ್ರವಾಸಕ್ಕೆ ಹೋಗಿ ಬಾಕಿಯಾದವರು ಸೇರಿದ್ದಾರೆ.

ಮಂಗಳವಾರ ಮಧ್ಯಾಹ್ನ ಮಂಗಳೂರಿನಿಂದ ದುಬೈಗೆ ತೆರಳಿದ್ದ ಖಾಲಿ ವಿಮಾನವು ರಾತ್ರಿ 7 ಗಂಟೆಗೆ ಪ್ರಯಾಣಿಕರೊಂದಿಗೆ ಹೊರಟು ತಡರಾತ್ರಿ ಮರಳಿ ಬಂದಿತು. ಇಳಿದ ತತ್‌ಕ್ಷಣವೇ ಜಿಲ್ಲಾ ವೈದ್ಯಾಧಿಕಾರಿಗಳ ತಂಡವು ವಿಶೇಷ ಪಿಇಪಿ ಕಿಟ್‌ ಧರಿಸಿ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿತು.

ಪ್ರಯಾಣಿಕರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಲಾಯಿತು, ಮಂಗಳೂರು ಜಿಲ್ಲಾಡಳಿತ  ಪ್ರಯಾಣಿಕರಿಗೆ ಎಲ್ಲಾ ರೀತಿಯ ಆಗತ್ಯ ನೆರವು ಒದಗಿಸಿತ್ತು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT