ಸಂಗ್ರಹ ಚಿತ್ರ 
ರಾಜ್ಯ

ವಂದೇ ಭಾರತ್ ಮಿಷನ್: ಅಮೆರಿಕದಿಂದ ಬೆಂಗಳೂರಿಗೆ ಬಂದಿಳಿದ ಮೊದಲ ವಿಮಾನ, ಕೊವಿಡ್ ಲಕ್ಷಣವಿದ್ದ ಪ್ರಯಾಣಿಕ ಆಸ್ಪತ್ರೆಗೆ ದಾಖಲು

ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಆರಂಭಿಸಿರುವ ವಂದೇ ಭಾರತ್ ಮಿಷನ್ ಏರ್ ಲಿಫ್ಟ್ ಕಾರ್ಯಾಚರಣೆ ಮುಂದವರೆದಿದ್ದು, ಅಮೆರಿಕದಲ್ಲಿದ್ದ ಭಾರತೀಯರನ್ನು ಹೊತ್ತ ವಿಮಾನ ಬೆಂಗಳೂರಿಗೆ ಬಂದಿಳಿದಿದೆ.

ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಆರಂಭಿಸಿರುವ ವಂದೇ ಭಾರತ್ ಮಿಷನ್ ಏರ್ ಲಿಫ್ಟ್ ಕಾರ್ಯಾಚರಣೆ ಮುಂದವರೆದಿದ್ದು, ಅಮೆರಿಕದಲ್ಲಿದ್ದ ಭಾರತೀಯರನ್ನು ಹೊತ್ತ ವಿಮಾನ ಬೆಂಗಳೂರಿಗೆ ಬಂದಿಳಿದಿದೆ.

ಮೂವರು ಮಕ್ಕಳು ಸೇರಿದಂತೆ ಒಟ್ಟು 109 ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾ ವಿಮಾನ ಸ್ಯಾನ್ ಫ್ರಾನ್ಸಿಸ್ಕೋ ವಿಮಾನ ನಿಲ್ದಾಣದಿಂದ ಇಂದು ಬೆಳಗ್ಗೆ 9.22ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ವಿಮಾನ ಇಳಿಯುತ್ತಿದ್ದಂತೆಯೇ ನಿಲ್ದಾಣದಲ್ಲಿ ಕೊಂಚ  ಗಂಭೀರ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಾರಣ ವಿಮಾನದಲ್ಲಿದ್ದ ಓರ್ವ ಪ್ರಯಾಣಿಕರ ಆರೋಗ್ಯ ಹದಗೆಟ್ಟಿತ್ತು. ಕೋವಿಡ್-19 ಲಕ್ಷಣಗಳಿಂದ ಬಳುತ್ತಿದ್ದ ಅವರನ್ನು ಕೂಡಲೇ ಆ್ಯಂಬುಲೆನ್ಸ್ ಮೂಲಕ ರಾಜೀವ್ ಗಾಂಧಿ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಬಳಿಕ ಎಲ್ಲ ಪ್ರಯಾಣಿಕರನ್ನೂ  ಸುರಕ್ಷಿತವಾಗಿ ಇಳಿಸಲಾಯಿತು.

ವಿಮಾನ ನಿಲ್ದಾಣದಲ್ಲಿಯೇ ಎಲ್ಲ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಯಿತು. ಏತನ್ಮಧ್ಯೆ ಇಬ್ಬರು ಪ್ರಯಾಣಿಕರ ಬ್ಯಾಗ್ ಗಳು ನಾಪತ್ತೆಯಾಗಿ ಪ್ರಯಾಣಿಕರು ಮತ್ತು ಅಧಿಕಾರಿಗಳ ನಡುವೆ ವಾಗ್ವಾದ ಕೂಡ ನಡೆಯಿತು. ಮತ್ತೆ ಕೆಲ ಪ್ರಯಾಣಿಕರು ಪ್ರಯಾಣಿದಿಂದ  ಆಯಾಸಗೊಂಡಿದ್ದರಾದರೂ, ಭಾರತಕ್ಕೆ ಸುರಕ್ಷಿತವಾಗಿ ಹಿಂದುರುಗಿದ ಸಮಾಧಾನದಲ್ಲಿದ್ದರು. 

ಇನ್ನು ಈ ಬಗ್ಗೆ ಮಾತನಾಡಿರುವ ಅಮೆರಿಕದಿಂದ ಬಂದ ಎಸ್ ಅರ್ಚನಾ ಎಂಬುವವರು, ನಾನು ಬೆಥೆಲ್ ಸ್ಕೂಲ್ ಆಫ್ ಸೂಪರ್ ನ್ಯಾಚುರಲ್ ಮಿನಿಸ್ಟ್ರಿಯ 2ನೇ ವರ್ಷದ ಥಿಯಾಲಜಿ ವಿದ್ಯಾರ್ಥಿನಿ. ಕಳೆದ ಮಾರ್ಚ್ ನಿಂದಲೂ ನಾನು ಭಾರತಕ್ಕೆ ಬರಲು ಪ್ರಯತ್ನಿಸುತ್ತಿದ್ದೆ,. ಆದರೆ ನನ್ನ ಬಳಿ  ಕೆಲಸವೂ ಇರಲಿಲ್ಲ. ಕೈಯಲ್ಲಿದ್ದ ಹಣ ಕೂಡ ಖಾಲಿಯಾಗಿತ್ತು. ಆದರೆ ಭಾರತ ಸರ್ಕಾರದ ನೆರವಿನಿಂದ ತನ್ನ ಮಾತೃ ದೇಶಕ್ಕೆ ವಾಪಸ್ ಆಗಿದ್ದೇನೆ ಎಂದು ಹೇಳಿದ್ದಾರೆ.

ಇನ್ನು ಇಂದು ಬೆಂಗಳೂರಿಗೆ ಬಂದ ಎಲ್ಲ ಪ್ರಯಾಣಿಕರನ್ನೂ 8 ಬಿಎಂಟಿಸ್ ಬಸ್ ಗಳಲ್ಲಿ ಎಂಜಿ ರಸ್ತೆ ಮತ್ತು ಹೊಸೂರು ರಸ್ತೆಯಲ್ಲಿರುವ ಖಾಸಗಿ ಹೊಟೆಲ್ ಗೆ ರವಾನಿಸಲಾಯಿತು. ಮುಂಜಾಗ್ರತಾ ಕ್ರಮವಾಗಿ ಎಲ್ಲರನ್ನೂ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ವಂದೇ ಭಾರತ್ ಮಿಷನ್ ನ  ಮೊದಲ ಹಂತದಲ್ಲಿ ಬೆಂಗಳೂರಿಗೆ ಒಟ್ಟು 7 ವಿಮಾನಗಳು ಬರಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT