ಸಂಗ್ರಹ ಚಿತ್ರ 
ರಾಜ್ಯ

ಸೋಂಕಿನ ಲಕ್ಷಣವಿಲ್ಲದ ಅನ್ಯ ಜಿಲ್ಲೆಗಳಿಂದ ಆಗಮಿಸಿದ ವ್ಯಕ್ತಿಗಳಿಗೆ ಕ್ವಾರಂಟೈನ್ ಇಲ್ಲ: ಆರೋಗ್ಯ ಇಲಾಖೆ ಪುನರುಚ್ಚಾರ

ಅನ್ಯ ಜಿಲ್ಲೆಯಿಂದ ಇನ್ನೊಂದು ಜಿಲ್ಲೆ ಆಗಮಿಸುವ ವ್ಯಕ್ತಿಗಳಲ್ಲಿ ಕೊರೋನಾ ಸೋಂಕಿನ ಲಕ್ಷಣಗಳಿಲ್ಲದಿದ್ದಲ್ಲಿ ಅವರಿಗೆ ಕ್ವಾರಂಟೈನ್ ಮಾಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯ ಪುನರುಚ್ಚರಿಸಿದೆ. 

ಬೆಂಗಳೂರು: ಅನ್ಯ ಜಿಲ್ಲೆಯಿಂದ ಇನ್ನೊಂದು ಜಿಲ್ಲೆ ಆಗಮಿಸುವ ವ್ಯಕ್ತಿಗಳಲ್ಲಿ ಕೊರೋನಾ ಸೋಂಕಿನ ಲಕ್ಷಣಗಳಿಲ್ಲದಿದ್ದಲ್ಲಿ ಅವರಿಗೆ ಕ್ವಾರಂಟೈನ್ ಮಾಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯ ಪುನರುಚ್ಚರಿಸಿದೆ. 

ರಾಜ್ಯದಲ್ಲಿ ಲಾಕ್ ಡೌನ್ ವಿನಾಯ್ತಿ ಹಿನ್ನೆಲೆಯಲ್ಲಿ ಅಂತರಜಿಲ್ಲೆ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ. ಆದರೆ, ಜಿಲ್ಲೆಯಿಂದ ಜಿಲ್ಲೆಗೆ ಪ್ರಯಾಣ ಬೆಳೆಸಿದರೆ ಕ್ವಾರಂಟೈನ್ ಮಾಡಲಾಗುತ್ತದೆ ಎಂಬ ವದಂತಿ ಇದೆ. ಈ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ  ಆಯುಕ್ತ ಪಂಕಜ್ ಕುಮಾರ್ ಪಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇವಲ ಹೊರರಾಜ್ಯ ಮತ್ತು ಹೊರಜಿಲ್ಲೆಗಳಿಂದ ವಿಶೇಷ ವಿಮಾನ ಮತ್ತು ರೈಲುಗಳಲ್ಲಿ ಆಗಮಿಸಿದವರಿಗೆ ಮಾತ್ರ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ, ಅನ್ಯ ಜಿಲ್ಲೆಗಳಿಗೆ ಪ್ರಯಾಣಿಸಿ ಎರಡು ದಿನಗಳಿಗೂ ಹೆಚ್ಚು ಕಾಲ ವಾಸ್ತವ್ಯ ಹೂಡಿದರೆ 14 ದಿನಗಳ ಕಾಲ ಕ್ವಾರಂಟೈನ್ ಮಾಡಲಾಗುವುದು ಎಂಬ ವದಂತಿಯಿತ್ತು. ಇದು ಜನರ ಆತಂಕಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್