ವಲಸೆ ಕಾರ್ಮಿಕರ ಚಿತ್ರ 
ರಾಜ್ಯ

ಲಾಕ್ ಡೌನ್: ಸಂಕಷ್ಟದಲ್ಲಿರುವವರಿಗೆ ಹೆಚ್ಚುವರಿಯಾಗಿ 162 ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ

ಕಳೆದ  ಒಂದು ವಾರದ ಹಿಂದಷ್ಟೇ ಲಾಕ್ ಡೌನ್ ನಿಂದ ಸಂಕಷ್ಟದ ಪರಿಸ್ಥಿತಿಯಲ್ಲಿರುವವರಿಗೆ 1, 610 ಕೋಟಿ ರೂ. ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿತ್ತು. ಇದೀಗ ಹೆಚ್ಚುವರಿಯಾಗಿ 162 ಕೋಟಿ ರೂ. ಪರಿಹಾರ ನೀಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಬೆಂಗಳೂರು: ಕಳೆದ  ಒಂದು ವಾರದ ಹಿಂದಷ್ಟೇ ಲಾಕ್ ಡೌನ್ ನಿಂದ ಸಂಕಷ್ಟದ ಪರಿಸ್ಥಿತಿಯಲ್ಲಿರುವವರಿಗೆ 1, 610 ಕೋಟಿ ರೂ. ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿತ್ತು. ಇದೀಗ ಹೆಚ್ಚುವರಿಯಾಗಿ 162 ಕೋಟಿ ರೂ. ಪರಿಹಾರ ನೀಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ತೋಟಗಾರಿಕೆ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 15 ಸಾವಿರ ರೂಪಾಯಿ, ವಿದ್ಯುತ್ ಮಗ್ಗದ ಕೆಲಸಗಾರರಿಗೆ  2 ಸಾವಿರ ರೂ. ಆರ್ಥಿಕ ನೆರವನ್ನು ಘೋಷಿಸಲಾಗಿದೆ. ಹೆಚ್ಚುವರಿಯಾಗಿ ಅಂದಾಜು 162 ಕೋಟಿ ಪರಿಹಾರವನ್ನು ಘೋಷಿಸಿದ್ದು, ಒಟ್ಟು 1, 772 ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿದಂತಾಗಿದೆ.

ಈ ಹಿಂದೆ ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 25 ಸಾವಿರ ರೂ. ಪರಿಹಾರ ನೀಡಲು ನಿರ್ಧರಿಸಲಾಗಿತ್ತು. ಇದೀಗ ತರಕಾರಿ ಮತ್ತು ಹಣ್ಣು ಬೆಳೆಗಾರರಿಗೆ 137 ಕೋಟಿ ರೂ. ಗಳ ಪರಿಹಾರವನ್ನು ನೀಡಲು ಉದ್ದೇಶಿಸಲಾಗಿದೆ. ಕಾಫಿ, ಕೊಪ್ರಾ ಮತ್ತಿತರ ವಾಣಿಜ್ಯ ಬೆಳೆಗಳಿಗೆ ಅದು ಅನ್ವಯವಾಗಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ನೇಕಾರ ಸಮ್ಮಾನ್ ಯೋಜನೆಯಡಿ 1. 25 ಲಕ್ಷ ವಿದ್ಯುತ್ ಮಗ್ಗದ ಕೆಲಸಗಾರರ ಬ್ಯಾಂಕ್ ಖಾತೆಗಳಿಗೆ 2 ಸಾವಿರ ರೂ. ನೇರವಾಗಿ ವರ್ಗಾವಣೆ ಆಗಲಿದೆ. ಈ ಯೋಜನೆಗಾಗಿ 25 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಪ್ರಕಟಿಸಿರುವ ಎರಡನೇ ಕಂತಿನ ಪ್ಯಾಕೇಜ್ ನಿಂದ ವಲಸೆ ಕಾರ್ಮಿಕರು, ಬೀದಿ ಕಾರ್ಮಿಕರು, ಸಣ್ಣ ರೈತರು ಮತ್ತಿತರ ಬಡ ಜನರಿಗೆ ಅನುಕೂಲವಾಗಲಿದೆ. ಏಕರೂಪದ ಕನಿಷ್ಠ ವೇತನ ನಿಗದಿಯಿಂದ ವಲಸೆ ಕಾರ್ಮಿಕರಿಗೆ ಹೆಚ್ಚಿನ ಲಾಭವಾಗಲಿದೆ. ಉಚಿತ ಪಡಿತರ, ಸ್ಥಿರ ಮನೆ ಬಾಡಿಗೆ ಇತ್ಯಾದಿಗಳು ಅವರಿಗೆ ಸುರಕ್ಷಿತ ಭಾವನೆ ಮೂಡಿಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೆದುಳು ತಿನ್ನುವ ಅಮೀಬಾ: ಶಬರಿಮಲೆ ಭಕ್ತರಿಗೆ ರಾಜ್ಯ ಆರೋಗ್ಯ ಇಲಾಖೆಯ ಮಾರ್ಗಸೂಚಿ, ಮುನ್ನೆಚ್ಚರಿಕೆ ಕ್ರಮಗಳೇನು?

ಬೆಳಗಾವಿ: ಮಲಗಿದ್ದಲ್ಲೇ ಜೀವಬಿಟ್ಟ ಮೂವರು ಯುವಕರು; ನಿಗೂಢ ಸಾವಿನಿಂದ ಪೋಷಕರ ಆಕ್ರಂದನ!

POCSO case: ಯಡಿಯೂರಪ್ಪಗೆ ಸಂಕಷ್ಟ, ಡಿ. 2 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್!

'ಆಪರೇಷನ್ ಕಾಡಾನೆ' ಸಕ್ಸಸ್: ನಾಲೆಗೆ ಬಿದ್ದು ಒದ್ದಾಡುತ್ತಿದ್ದ ಗಜರಾಜನ ರಕ್ಷಣೆ, ಅರಣ್ಯ ಇಲಾಖೆ ಸಾಹಸಕ್ಕೆ ಶ್ಲಾಘನೆ! Video

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

SCROLL FOR NEXT