ಬಿಎಚ್ ಅನಿಲ್ ಕುಮಾರ್ 
ರಾಜ್ಯ

ಹೊರರಾಜ್ಯದಿಂದ ಬಂದವರಿಗೆ ಕಡ್ಡಾಯ ಕ್ವಾರಂಟೈನ್, ಮಹಾನಗರ ವಾಸಿಗಳ ಆರೋಗ್ಯ ತಪಾಸಣೆ: ಬಿಬಿಎಂಪಿ ಮಹತ್ವದ ತೀರ್ಮಾನ 

ಕೊರೋನಾ ತಡೆಗಟ್ತುವ ಸಲುವಾಗಿ ಹೊರರಾಜ್ಯಗಳಿಂದ ಬೆಂಗಲೂರಿಗೆ ಆಗಮಿಸುವವರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ ಮಾಡಲಾಗುತ್ತದೆ ಎಂದು ಬಿಬಿಎಂಪಿ ಮತ್ತೊಮ್ಮೆ ಪುನರುಚ್ಚರಿಸಿದೆ. ಕೊರೋನಾ ತಡೆಗೆ ಗೊಳ್ಳಲಾಗುವ ಕ್ರಮಗಳ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ ಸರ್ಕಾರದ ಸೂಚನೆಯ ಮೇರೆಗೆ ಬಿಬಿಎಂಪಿ ವ್ಯಾಪ್ತಿಗೆ ಬರುವ ಎಲ್ಲಾ ಸಾರ್ವಜನಿಕರ ಆರೋಗ್ಯ ತಪಾಸಣೆ ಮಾಡಲಾ

ಬೆಂಗಳೂರು: ಕೊರೋನಾ ತಡೆಗಟ್ತುವ ಸಲುವಾಗಿ ಹೊರರಾಜ್ಯಗಳಿಂದ ಬೆಂಗಲೂರಿಗೆ ಆಗಮಿಸುವವರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ ಮಾಡಲಾಗುತ್ತದೆ ಎಂದು ಬಿಬಿಎಂಪಿ ಮತ್ತೊಮ್ಮೆ ಪುನರುಚ್ಚರಿಸಿದೆ. ಕೊರೋನಾ ತಡೆಗೆ ಗೊಳ್ಳಲಾಗುವ ಕ್ರಮಗಳ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ ಸರ್ಕಾರದ ಸೂಚನೆಯ ಮೇರೆಗೆ ಬಿಬಿಎಂಪಿ ವ್ಯಾಪ್ತಿಗೆ ಬರುವ ಎಲ್ಲಾ ಸಾರ್ವಜನಿಕರ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದಿದೆ.

ಅಂತರಾಜ್ಯ ವಲಸಿಗರು, ಪ್ರವಾಸಿಗರು ಬೆಂಗಳೂರಿಗೆ ಬಂದಾಗ ಅವರನ್ನು ಅವರದೇ ವೆಚ್ಚದಲ್ಲಿ ಹೋಟೆಲ್ ಗಳಲ್ಲಿ ಅಥವಾ ಸರ್ಕಾರಿ ವೆಚ್ಚದಲ್ಲಿ ಹಾಸ್ಟೆಲ್​ಗಳಲ್ಲಿ 14 ದಿನಗಳ ಕಾಲ ಕ್ವಾರಂತೈನ್ ಮಾಡಲಾಗುವುದು. 10  ದಿನಗಳ ನಂತರ ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳಿಸಲಾಗುತ್ತದೆ. ಈ ವೇಳೆ ವರದಿಯು ಪಾಸಿಟಿವ್ ಬಂದರೆ ಆಸ್ಪತ್ರೆಗೂ ನೆಗೆಟಿವ್ ಬಂದರೆ ಮನೆಗೂ ಕಳಿಸಲಾಗುವುದು.  

ಹೊರ ರಾಜ್ಯಗಳಿಂದ ಬಂದ  ಗರ್ಭಿಣಿಯರು, 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, 60 ವರ್ಷ ಮೇಲ್ಪಟ್ಟ ವೃದ್ದರಿಗೆ ಎರಡು ದಿನಗಳಲ್ಲೇ ಪರೀಕ್ಷೆ ನಡೆಸಲಾಗುವುದು. ಒಂದೊಮ್ಮೆ ಅವರಿಗೆ ವರದಿ ನೆಗೆಟಿವ್ ಎಂದು ಬಂದರೆ ಹಲವು ಷರತ್ತುಗಳನ್ನು ವಿಧಿಸಿ ಮನೆಗೆ ಕಳಿಸಲಾಗುತ್ತದೆ. ಬಳಿಕ ಹದಿನಾಲ್ಕು ದಿನದ ನಂತರ ಮತ್ತೆ ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಗುರಿಪಡಿಸಲಾಗುವುದು ಎಂದು ಬಿಬಿಎಂಪಿ ಪ್ರಕಟಣೆ ಹೇಳಿದೆ.

ಇದಲ್ಲದೆ ಸರ್ಕಾರದ ಸೂಚನೆಯ ಮೇರೆಗ #ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಸಾರ್ವಜನಿಕರ ಆರೋಗ್ಯ ತಪಾಸಣೆ ಮಾಡಲು ನಿರ್ಧರಿಸಿದೆ. ಈಗಾಗಲೆ ಪಾಲಿಕೆಯು 3000ಕ್ಕೂ ಹೆಚ್ಚು ತಂಡಗಳನ್ನು ರಚನೆ‌ ಮಾಡಿದ್ದು ಆಯಾ ಬ್ಲಾಕ್ ಗಳಲ್ಲಿ ಆರೋಗ್ಯ ತಪಾಸಣೆ ಕೈಗೊಳ್ಳಲಾಗುವುದು. ‌‌ಇದೇ ವೇಳೆ ದೀರ್ಘ ಕಾಯಿಲೆಗಳಿಂದ ಭಾಧಿತರಾಗಿರುವವರ ಮಾಹಿತಿ ಸಂಗ್ರಹಿಸಲಾಗುವುದು. ಎಂದು ಬಿಎಚ್ ಅನಿಲ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT