ಸಾಂದರ್ಭಿಕ ಚಿತ್ರ 
ರಾಜ್ಯ

ಲಾಕ್ ಡೌನ್: ಚಿಕ್ಕಬಳ್ಳಾಪುರದಲ್ಲಿ ವಿಷ ಸೇವಿಸಿ ಹೂವು ಬೆಳೆಗಾರ ಆತ್ಮಹತ್ಯೆ

ಜಮೀನಿನಲ್ಲಿ ಹೂವು ಬೆಳೆದಿದ್ದ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಿಗುಪ್ಪೆ ಗ್ರಾಮದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಜಮೀನಿನಲ್ಲಿ ಹೂವು ಬೆಳೆದಿದ್ದ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಿಗುಪ್ಪೆ ಗ್ರಾಮದಲ್ಲಿ ನಡೆದಿದೆ.

55 ವರ್ಷದ ರೈತ ರಾಮಪ್ಪ ಶನಿವಾರ ಬೆಳಗ್ಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ಜಮೀನಿಗೆ ತೆರಳಿ ಮನೆಗೆ ವಾಪಾಸಾಗಿ ವಿಷ ಸೇವಿಸಿದ ಅವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಫಲಕಾರಿಯಾಗದೇ ಬೆಳಗ್ಗೆ 11.30ರ ಸುಮಾರಿಗೆ ರಾಮಪ್ಪ ಅವರು ಮೃತಪಟ್ಟಿದ್ದಾರೆ.

ಲಾಕ್ ಡೌನ್ ಹಿನ್ನಲೆಯಲ್ಲಿ ಎರಡು ಎಕರೆಯಲ್ಲಿ ಬೆಳೆದ ಹೂವಿನ ಬೆಳೆ ಮಾರಾಟವಾಗದೇ, ಸಾಲದ ಬಾಧೆಯಿಂದ ರಾಮಪ್ಪ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಿ ಮೃತರ ಪತ್ನಿ ನಾರಾಯಣಮ್ಮ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಮ್ಮ ಮೂರು ಎಕರೆ ಜಮೀನಿನ ಪೈಕಿ ರಾಮಪ್ಪ ಅವರು ಎರಡು ಎಕರೆಯಲ್ಲಿ 1 ಲಕ್ಷ ರೂ. ಖರ್ಚು ಮಾಡಿ ಹೂವು ಬೆಳೆದಿದ್ದರು. ಆದರೆ, ಲಾಕ್ ಡೌನ್ ಪರಿಣಾಮ ಹೂವು ‌ಮಾರಾಟವಾಗದ್ದರಿಂದ ಮನನೊಂದು ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ನಾರಾಯಣಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!