ನಿರುಪಮಾ ರಾವ್ 
ರಾಜ್ಯ

ಕೊವಿಡ್-19 ಮೂಲದ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಮಾಜಿ ವಿದೇಶಾಂಗ ಕಾರ್ಯದರ್ಶಿ ನಿರುಪಮಾ ರಾವ್ ಕರೆ

ಮಹಾಮಾರಿ ಕೊವಿಡ್-19ನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದ್ದು, ಕೊರೋನಾ ವೈರಸ್ ಮೂಲದ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಮಾಜಿ ವಿದೇಶಾಂಗ ಕಾರ್ಯದರ್ಶಿ ಮತ್ತು ಮಾಜಿ ಚೀನಾ ರಾಯಭಾರಿ ನಿರುಪಮಾ ರಾವ್ ಅವರು ಹೇಳಿದ್ದಾರೆ.

ಬೆಂಗಳೂರು: ಮಹಾಮಾರಿ ಕೊವಿಡ್-19ನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದ್ದು, ಕೊರೋನಾ ವೈರಸ್ ಮೂಲದ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಮಾಜಿ ವಿದೇಶಾಂಗ ಕಾರ್ಯದರ್ಶಿ ಮತ್ತು ಮಾಜಿ ಚೀನಾ ರಾಯಭಾರಿ ನಿರುಪಮಾ ರಾವ್ ಅವರು ಹೇಳಿದ್ದಾರೆ.

ನಗರ ಮೂಲದ ಥಿಂಕ್ ಟ್ಯಾಂಕ್ ಸಿನರ್ಜಿಯಾ ಫೌಂಡೇಶನ್ ಶುಕ್ರವಾರ ಆಯೋಜಿಸಿದ್ದ ವೆಬಿನಾರ್ ನಲ್ಲಿ ಮಾತನಾಡಿದ ನಿರುಪಮಾ ರಾವ್ ಅವರು, ಈ ವರ್ಷ ಭಾರತ ಮತ್ತು ಚೀನಾ, ಎರಡೂ ಶ್ರೇಷ್ಠ ಪ್ರಾಚೀನ ನಾಗರಿಕತೆಗಳಾಗಿದ್ದು. ತಮ್ಮ 70 ವರ್ಷಗಳ ರಾಜತಾಂತ್ರಿಕ ಸಂಬಂಧವನ್ನು ಸ್ಮರಿಸುತ್ತಿವೆ. ಆದರೆ 'ಹಿಮಾಲಯನ್ ಗಡಿಯಿಂದ ಬಂದ ಸುದ್ದಿ'ಗಳಿಂದ ಇದು ನಾಶವಾಗಿದೆ ಎಂದು ಅವರು ಹೇಳಿದರು.

"ಉಭಯ ದೇಶಗಳ ಸಂಬಂಧವು ಸಮತೋಲನವನ್ನು ಆಧರಿಸಿದೆ. ನಮ್ಮ ಭವಿಷ್ಯವನ್ನು ನಿರ್ಧರಿಸುವ ವಿಷಯಗಳು ಶಾಂತಿಯನ್ನು ಆಧರಿಸಿರಬೇಕು, ಸಂಘರ್ಷವಲ್ಲ. ನಾವು ನಮ್ಮ ಜನರ ಉದ್ದೇಶವನ್ನು ಪೂರೈಸಬೇಕು ಮತ್ತು ನಮ್ಮ ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು" ಎಂದು ಹೇಳಿದರು.

ಕೊರೋನಾ ವೈರಸ್ ಮೂಲದ ಬಗ್ಗೆ 'ನಿಷ್ಪಕ್ಷಪಾತ ತನಿಖೆಗೆ' ಕರೆ ನೀಡಿದ ರಾವ್, "ವಿಶ್ವ ನಾಯಕರು ಎಲ್ಲರ ಆರೋಗ್ಯಕ್ಕಾಗಿ ಕೊವಿಡ್-19 ಲಸಿಕೆಯನ್ನು ಎದುರು ನೋಡುತ್ತಿದ್ದಾರೆ ಮತ್ತು ಅದು ನಮ್ಮ ಸಾಮಾನ್ಯ ಗುರಿಯಾಗಿರಬೇಕು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT