ಮುತ್ತಪ್ಪ ರೈ 
ರಾಜ್ಯ

ಈ ಎರಡು ಕಾರಣಗಳಿಂದಾಗಿ ಮಾಜಿ ಭೂಗತ ದೊರೆ ಮುತ್ತಪ್ಪ ರೈ ತವರಿಗೆ ಮರಳಿದ್ದು!

ವಿಜಯ ಬ್ಯಾಂಕ್ ನಲ್ಲಿ ಸಾಮಾನ್ಯ ಕ್ಲರ್ಕ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ ನೆಟ್ಟಾಲ ಮುತ್ತಪ್ಪ ರೈ 1980 ರಲ್ಲಿ ಭೂಗತ ಲೋಕಕ್ಕೆ ಎಂಟ್ರಿ ಕೊಟ್ಟಿದ್ದರು.

ಮಂಗಳೂರು: ವಿಜಯ ಬ್ಯಾಂಕ್ ನಲ್ಲಿ ಸಾಮಾನ್ಯ ಕ್ಲರ್ಕ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ ನೆಟ್ಟಾಲ ಮುತ್ತಪ್ಪ ರೈ 1980 ರಲ್ಲಿ ಭೂಗತ ಲೋಕಕ್ಕೆ ಎಂಟ್ರಿ ಕೊಟ್ಟಿದ್ದರು.

ಅದಾದ ನಂತರ ಬೆಂಗಳೂರು,ದುಬೈ, ಮುಂಬೈ ಗಳಲ್ಲಿ ಅನೇಕ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದ್ದರು. ಭೂಗತ ದೊರೆಯಾಗಿ ಮೆರೆಯುತ್ತಿದ್ದರೂ ತವರಿನ ನಂಟನ್ನು ಮರೆತಿರಲಿಲ್ಲ,  ತಮ್ಮ ಮನೆ ದೇವರು ಪುತ್ತೂರಿನ  ಮಹಾಲಿಂಗೇಶ್ವರ ದೇವಾಲಯ ಮತ್ತು ಅಲ್ಲಿ ನಡೆಯುವ ಕಂಬಳಕ್ಕಾಗಿ ವರ್ಷಕ್ಕೊಮ್ಮೆ ತವರಿಗೆ ಭೇಟಿ ನೀಡುತ್ತಿದ್ದರು.

68 ವರ್ಷದ ಮುತ್ತಪ್ಪ ರೈ ಕ್ಯಾನ್ಸರ್ ನಿಂದಾಗಿ ಶುಕ್ರವಾರ ನಿಧನರಾದರು, ಬಿಡದಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ, 2008 ರಲ್ಲಿ ಜಯ ಕರ್ನಾಟಕ ಸಂಘಟನೆ ಸ್ಥಾಪಿಸಿದ ಮುತ್ತಪ್ಪ ರೈ ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ, 

ಅಪರಾಧ ಜಗತ್ತನ್ನು 15 ವರ್ಷಗಳ ಹಿಂದೆ ತೊರೆದ ರೈ,ಕಂಬಳ ಕ್ರೀಡೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದರು., ಅನಾರೋಗ್ಯದ ಕಾರಣ ಈ ವರ್ಷ ಕಂಬಳಕ್ಕೆ ಬರಲು ಸಾಧ್ಯವಾಗಿರಲಿಲ್ಲ,  ಕಳೆದ ಕೆಲವು ವರ್ಷಗಳಿಂದ ವರ್ಷದಲ್ಲಿ ಒಮ್ಮೆಯಾದರೂ  ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡುತ್ತಿದ್ದರು. ವಿವಿಧ ದೇವಾಲಯಗಳಿಗೆ ಮತ್ತು  ದೇಣಿಗೆ ನೀಡಿದ್ದರು,

ಮಹತೋಬಾರ ಕುಕ್ಕೆ ಸುಬ್ರಮಣ್ಯ ದೇವಾಲಯಕ್ಕೆ 2.5 ಕೋಟಿ ರು ಮೌಲ್ಯದ ರಥವನ್ನು ನೀಡಿದ್ದರು, ರೈ ಅವರು ಕರಾವಳಿ ಭಾಗದ ಜನರಿಗೆ ಹೆಚ್ಚಿನ ಸಹಾಯ ಮಾಡುತ್ತಿದ್ದರು.   ವಿಶೇಷವಾಗಿ ಜಮೀನು ವಿವಾದಕ್ಕೆ ಸಂಬಂಧಿಸಿದ ವಿಷಯಗಳಿಗೆ ಸಂಬಂಧಿಸಿದಂತೆ ಸಹಾಯ ಮಾಡಿದ್ದರು..

ವಿದ್ಯಾರ್ಥಿ ಜೀವನದಲ್ಲಿದ್ದಾಗಲೇ ರೈ ಅಪರಾಧ ಲೋಕಕ್ಕೆ ಕಾಲಿಟ್ಟಿದ್ದರು. ರಾಜಕೀಯಕ್ಕೆ ಕಾಲಿಡುವಂತೆ ಅವರ ಬೆಂಬಲಿಗರು ಒತ್ತಡ ಹೇರಿದ್ದರು.ಆದರೆ ಅವರ ಈ ಆಸೆ ಎಂದಿಗೂ ನೆರವೇರಲಿಲ್ಲ. ರೈ ಸಾವಿನಿಂದ ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನ ತೆರವಾಗಿದ್ದು ಡಿಸಿಎಂ ಅಶ್ವತ್ಥ ನಾರಾಯಣ ಆ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿದ್ದಾರೆ ಎಂದು ಕಂಬಳ ಆಯೋಜಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!