ಸೋಮಶೇಖರ್ 
ರಾಜ್ಯ

ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ಸಹಾಯ ಧನ ವಿತರಣೆಗೆ ಸೋಮಶೇಖರ್ ಚಾಲನೆ

ಕೋವಿಡ್ 19 ಸಂದರ್ಭದಲ್ಲಿ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂಪಾಯಿಯನ್ನು ಸಹಕಾರ ಇಲಾಖೆ ವತಿಯಿಂದ ಕೊಡುತ್ತಿದ್ದೇವೆ.

ಮೈಸೂರು: ಕೋವಿಡ್ 19 ಸಂದರ್ಭದಲ್ಲಿ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂಪಾಯಿಯನ್ನು ಸಹಕಾರ ಇಲಾಖೆ ವತಿಯಿಂದ ಕೊಡುತ್ತಿದ್ದೇವೆ. ಇದಕ್ಕಾಗಿ ಒಟ್ಟು 12 ಕೋಟಿ 37 ಲಕ್ಷ ರೂಪಾಯಿ ಖರ್ಚು ಆಗಲಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ರಾಜ್ಯದ 40,500 ಆಶಾ ಕಾರ್ಯಕರ್ತರಿಗೆ ಅನುಕೂಲವಾಗುವ ತಲಾ 3 ಸಾವಿರ ರೂಪಾಯಿ ಸಹಾಯಧನ ವಿತರಣೆ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ 180 ಜನರಿಗೆ ಮೈಸೂರಿನಲ್ಲಿ ವಿತರಣೆ ಮಾಡುವ ಮೂಲಕ ಸಚಿವರು ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಕೊರೋನಾ ವಿರುದ್ಧ ಹೋರಾಡಿದ ರಾಜ್ಯದ ಎಲ್ಲ ಆಶಾ ಕಾರ್ಯಕರ್ತೆಯರಿಗೆ ಸಹಾಯಧನ ವಿತರಣೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಕೇಳಿದಾಗ ಇಲಾಖೆ ವತಿಯಿಂದಲೇ ಹಣವನ್ನು ಭರಿಸುವುದಾಗಿ ತಿಳಿಸಿದೆ. ನಂತರ ಶುಕ್ರವಾರ ಮುಖ್ಯಮಂತ್ರಿಗಳು ಸಹಾಯಧನದ ಬಗ್ಗೆ ಘೋಷಿಸಿದರು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT