ಯಡಿಯೂರಪ್ಪ 
ರಾಜ್ಯ

ಶಾಪಿಂಗ್ ಮಾಲ್ ಪುನರಾರಂಭಕ್ಕೆ ಎಸ್‌ಸಿಎಐಯಿಂದ ಮುಖ್ಯಮಂತ್ರಿಗಳಿಗೆ ಮನವಿ

ಶಾಪಿಂಗ್ ಮಾಲ್ ಗಳ ಕಾರ್ಯಾಚರಣೆ ಪುನರಾರಂಭಿಸಲು ಅನುಮತಿ ನೀಡುವಂತೆ ಶಾಪಿಂಗ್ ಸೆಂಟರ್ ಅಸೋಸಿಯೇಷನ್ ಆಫ್ ಇಂಡಿಯಾ ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದೆ.

ಬೆಂಗಳೂರು: ಶಾಪಿಂಗ್ ಮಾಲ್ ಗಳ ಕಾರ್ಯಾಚರಣೆ ಪುನರಾರಂಭಿಸಲು ಅನುಮತಿ ನೀಡುವಂತೆ ಶಾಪಿಂಗ್ ಸೆಂಟರ್ ಅಸೋಸಿಯೇಷನ್ ಆಫ್ ಇಂಡಿಯಾ ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದೆ.

ಫೀನಿಕ್ಸ್ ಮಾಲ್ಸ್ ನ ವ್ಯವಸ್ಥಾಪಕ ನಿರ್ದೇಶಕ ಅತುಲ್ ರುಯಾ ಅವರು ಈ ಬಗ್ಗೆ ಮಾತನಾಡಿ, "ಉದ್ಯಮದ ಮುನ್ನೆಲೆ ಕಾರ್ಯಾಚರಣೆ ನಡೆಸದೇ ಹಿನ್ನೆಲೆ ಕೆಲಸ ಮಾಡಲು ಸಾಧ್ಯವಿಲ್ಲ. ನಾವು ಮಾಲ್ ಗಳಲ್ಲಿ ನಿಯಮಿತವಾದ ಕಾರ್ಯಾಚರಣೆ ಅವಧಿಯನ್ನು ನಿಗದಿಪಡಿಸುವುದು, ಸಾಮಾಜಿಕ ಅಂತರ ಶಿಷ್ಠಾಚಾರಗಳನ್ನು ಜಾರಿಗೆ ತರುವುದು, ಸಿನಿಮಾ
ಮಂದಿರಗಳಲ್ಲಿ ಇಬ್ಬರ ನಡುವೆ ಒಂದು ಸೀಟನ್ನು ಖಾಲಿ ಬಿಡುವುದು, ರೆಸ್ಟೋರೆಂಟ್ ಗಳಲ್ಲಿ ಗ್ರಾಹಕರ ನಡುವೆ ಅಂತರ, ಹ್ಯಾಂಡ್ ಸ್ಯಾನಿಟೈಸರ್ ಮತ್ತು ಪ್ರವೇಶ ದ್ವಾರಗಳಲ್ಲಿ ಉಷ್ಣಾಂಶ ಪರೀಕ್ಷೆ ಮಾಡುವುದು.

ಎಲ್ಲಾ ರೀಟೇಲ್ ಶಾಪ್ ಗಳಲ್ಲಿ ಸಿಬ್ಬಂದಿಗೆ ಮಾಸ್ಕ್ ಧರಿಸುವುದು ಕಡ್ಡಾಯ ಸೇರಿದಂತೆ ಇನ್ನೂ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಹೀಗಾಗಿ ಮಾಲ್ ತೆರೆಯಲು ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.

ಪಿಂಗ್ ಮಾಲ್ ಗಳನ್ನು ಪುನರಾರಂಭಿಸಿದರೆ ಆರ್ಥಿಕ ಪುನಶ್ಚೇತನಕ್ಕೆ ನೆರವಾಗಲಿದೆ. ಇಷ್ಟೇ ಅಲ್ಲದೇ, ಲಕ್ಷಾಂತರ ಕಾರ್ಮಿಕರಿಗೆ ಮತ್ತು ಅವರು ಅವಲಂಬಿಸಿರುವ ವ್ಯವಹಾರಗಳನ್ನು ಮುಂದುವರಿಸಿ ಆರ್ಥಿಕವಾಗಿ ಸುಧಾರಣೆ ಕಾಣಬಹುದಾಗಿದೆ. ಈ ಮೂಲಕ ಅವರ ಜೀವನೋಪಾಯ ಸುಧಾರಣೆ ಕಾಣಲಿದೆ.

ಇದಲ್ಲದೇ, ಮಾಲ್ ಗಳು ಆರಂಭವಾದರೆ ಪಾವತಿ ವ್ಯವಸ್ಥೆಗಳು, ಬ್ಯಾಂಕಿಂಗ್ ಸಂಸ್ಥೆಗಳು ತಮಗಾಗಿರುವ ಆರ್ಥಿಕ ಆದಾಯದ ಕೊರತೆಯಿಂದ ಹೊರ ಬರಬಹುದಾಗಿದೆ ಎಂದು ಮನದಟ್ಟು ಮಾಡಿದ್ದಾರೆ. ಕೊರೋನಾ ಸೋಂಕಿನ ಭೀತಿಯಿಂದಾಗಿ ಮಾರ್ಚ್ 15 ರಿಂದ ರಾಜ್ಯದ ಎಲ್ಲಾ ಮಾಲ್ ಗಳು ಬಂದ್ ಆಗಿವೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT