ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ 55 ಹೊಸ ಕೊರೋನಾ ಪ್ರಕರಣ, ಸೋಂಕಿತರ ಸಂಖ್ಯೆ 1147ಕ್ಕೇರಿಕೆ

 ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 55 ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1147ಕ್ಕೆರಿಕೆಯಾಗಿದೆ. 

ಬೆಂಗಳೂರು:  ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 55 ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1147ಕ್ಕೆರಿಕೆಯಾಗಿದೆ.

ಉಡುಪಿಯ 54 ವರ್ಷದ ನಿವಾಸಿ ಮೇ 14ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರ ಪರೀಕ್ಷಾ ವರದಿಯಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ಇವರು ಹೃದಯ ಸಂಬಂಧಿ ಕಾಯಿಲೆಯಿಂದ ಉಡುಪಿಯ ಖಾಸಗಿ ಆಸ್ಪತ್ರೆಗೆ  ದಾಖಲಾಗಿದ್ದರು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇದರಿಂದ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 37ಕ್ಕೇರಿಕೆಯಾಗಿದೆ. ಒಟ್ಟು 509 ಜನರು ಗುಣಮುಖರಾಗಿದ್ದಾರೆ.

ಇದಲ್ಲದೆ ಮಂಡ್ಯದಲ್ಲಿ 22, ಕಲಬುರ್ಗಿದಲ್ಲಿ 10, ಹಾಸನದಲ್ಲಿ 6, ಯಾದಗಿರಿದಲ್ಲಿ 3, ಕೋಲಾರದಲ್ಲಿ 3, ದಕ್ಷಿಣ ಕನ್ನಡದಲ್ಲಿ 2, ಧಾರವಾಡದಲ್ಲಿ 4, ಶಿವಮೊಗ್ಗದಲ್ಲಿ 2,  ವಿಜಯಪುರದಲ್ಲಿ 1ಪ್ರಕರಣಗಳು ವರದಿಯಾಗಿದೆ. 

ಮಂಡ್ಯದಲ್ಲಿ ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ 22 ಕೊರೋನಾ ಸೋಂಕು ಪ್ರಕರಣ ದಾಖಲಾಗಿದ್ದು ಜಿಲ್ಲೆಯಲ್ಲಿ ಒಟ್ತಾರೆ ಸೋಂಕಿತರ ಸಂಖ್ಯೆ 72ಕ್ಕೆ ತಲುಪಿದೆ.

ಇನ್ನು ಭಾನುವಾರ ರಾಜ್ಯದಲ್ಲಿ ಒಟ್ಟಾರೆ 13 ಮಂದಿ ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರ ಇದೀಗ  ರಾಜ್ಯದಲ್ಲಿ ಸದ್ಯ 600 ಸಕ್ರಿಯ ಕೊರೋನಾ ಪ್ರಕರಣಗಳು ಇವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT