ಆತ್ಮಹತ್ಯೆ 
ರಾಜ್ಯ

ಕೊಳ್ಳೇಗಾಲದಲ್ಲಿ ಪೇದೆಯ ಪತ್ನಿ ನೇಣಿಗೆ ಶರಣು: ಕಾರಣ ನಿಗೂಢ 

ಪೊಲೀಸ್ ಪೇದೆಯ ಪತ್ನಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕೊಳ್ಳೆಗಾಲದಲ್ಲಿ ಶನಿವಾರ ನಡೆದಿದೆ.

ಕೊಳ್ಳೇಗಾಲ: ಪೊಲೀಸ್ ಪೇದೆಯ ಪತ್ನಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕೊಳ್ಳೆಗಾಲದಲ್ಲಿ ಶನಿವಾರ ನಡೆದಿದೆ.

ಕೊಳ್ಳೇಗಾಲದ ಪಟ್ಟಣ ಪೊಲೀಸ್ ಠಾಣೆಯ ಪೇದೆ ಪರುಶುರಾಮ್ ಎಂಬುವವರ ಪತ್ನಿ ನಾಗರತ್ನ (19 ವರ್ಷ) ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಪರಶುರಾಮ್ ಮೂಲತಃ ರಾಯಚೂರಿನವರಾಗಿದ್ದು, ಕಳೆದ 3-4 ವರ್ಷಗಳಿಂದ ಪೊಲೀಸ್ ಪೇದೆಯಾಗಿ ಕೆಲಸ  ನಿರ್ವಹಿಸುತ್ತಿದ್ದಾರೆ. ಅದೇ ಜಿಲ್ಲೆಯ ತನ್ನ ಸಂಬಂಧಿಕರಾದ ನಾಗರತ್ನ ಅವರನ್ನು ಒಂದು ವರ್ಷದ‌ ಹಿಂದೆ ಮದುವೆಯಾಗಿ ಇಲ್ಲಿನ ಪೊಲೀಸ್ ವಸತಿ ಗೃಹದಲ್ಲಿ ವಾಸವಾಗಿದ್ದರು.

ಎಂದಿನಂತೆ ಕರ್ತವಕ್ಕೆ ತೆರಳಿ ಮಧ್ಯಾಹ್ನ ಊಟದ ಸಮಯದಲ್ಲಿ ಮನೆಗೆ ಹಿಂತಿರುಗಿದಾಗ ಮನೆಯ ಬಾಗಿಲು ತೆರೆಯದಿರುವುದನ್ನು ಕಂಡು ಪೇದೆ ಪರಶುರಾಮ್​ ಗಾಬರಿಯಾಗಿದ್ದಾರೆ. ಬಳಿಕ ಬಾಗಿಲು ಒಡೆದು ನೋಡಿದಾಗ ನಾಗರತ್ನ ನೇಣಿಗೆ ಶರಣಾಗಿದ್ದಾಳೆ. ಶವವನ್ನು ಸರ್ಕಾರಿ ಆಸ್ಪತ್ರೆಗೆ  ರವಾನಿಸಲಾಗಿದ್ದು ಮೃತರ ಸಂಬಂಧಿಕರು ಬಂದು ದೂರು ನೀಡಿದ ಮೇಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT