ಸಂಗ್ರಹ ಚಿತ್ರ 
ರಾಜ್ಯ

ರಾಮನಗರ: ಅರಣ್ಯಾಧಿಕಾರಿಗಳಿಂದ 2 ಚಿರತೆ ಮರಿಗಳ ಸೆರೆ

ರಾಮನಗರ ಜಿಲ್ಲೆಯಲ್ಲಿ ಚಿರತಣಗಳ ಹಾವಳಿ ಹೆಚ್ಚಾಗಿದ್ದು, ಯಾವ ಭಾಗದಲ್ಲಿ ನೋಡಿದರೂ ಚಿರತೆ ದಾಳಿಯ ಮಾತುಗಳೇ ಕೇಳಿ ಬರುತ್ತಿವೆ. ಈ ಹಿಂದೆ ನರಭಕ್ಷಕ ಚಿರತೆ ರಾಮನಗರದಲ್ಲಿ 62 ವರ್ಷದ ಮಹಿಳೆಯೊಬ್ಬರನ್ನು ಕೊಂದು ಹಾಕಿತ್ತು. ಈ ಬೆಳವಣಿಗೆ ಬಳಿಕ ಚಿರತೆ ಸೆರೆಹಿಡಿಯಲು ಬಲೆ ಬೀಸಿದ್ದ ಅರಣ್ಯಾಧಿಕಾರಿಗಳು ಇದೀಗ ಎರಡು ಚಿರತೆ ಮರಿಗಳನ್ನು ಸೆರೆ ಹಿಡಿದಿದ್ದಾರೆ. 

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ ಚಿರತಣಗಳ ಹಾವಳಿ ಹೆಚ್ಚಾಗಿದ್ದು, ಯಾವ ಭಾಗದಲ್ಲಿ ನೋಡಿದರೂ ಚಿರತೆ ದಾಳಿಯ ಮಾತುಗಳೇ ಕೇಳಿ ಬರುತ್ತಿವೆ. ಈ ಹಿಂದೆ ನರಭಕ್ಷಕ ಚಿರತೆ ರಾಮನಗರದಲ್ಲಿ 62 ವರ್ಷದ ಮಹಿಳೆಯೊಬ್ಬರನ್ನು ಕೊಂದು ಹಾಕಿತ್ತು. ಈ ಬೆಳವಣಿಗೆ ಬಳಿಕ ಚಿರತೆ ಸೆರೆಹಿಡಿಯಲು ಬಲೆ ಬೀಸಿದ್ದ ಅರಣ್ಯಾಧಿಕಾರಿಗಳು ಇದೀಗ ಎರಡು ಚಿರತೆ ಮರಿಗಳನ್ನು ಸೆರೆ ಹಿಡಿದಿದ್ದಾರೆ. 

ಮಾಗಡಿ ತಾಲೂಕಿನ ಸಿಡಗನ ಪಾಳ್ಯ ಹಾಗೂ ಬೋಡಗನಪಾಳ್ಯದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಎರಡು ಚಿರತೆ ಮರಿಗಳು ಸೆರೆಯಾಗಿವೆ. 

ಮಹಿಳೆಯನ್ನು ಚಿರತೆ ಕೊಂದು ಹಾಕಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಹನ್ನೊಂದು ಕಡೆ ಬೋನುಗಳನ್ನು ಇರಿಸಿತ್ತು. ಈ 11 ಬೋನಿನ ಪೈಕಿ 2 ಬೋನುಗಳಲ್ಲಿ ಚಿರತೆ ಮರಿಗಳು ಸೆರೆಸಿಕ್ಕಿವೆ. ಚಿರತೆ ಮಹಿಳೆಯನ್ನು ಕೊಂದು ಹಾಕಿದ್ದ ಸ್ಥಳದಿಂದ 4 ಕಿ.ಮೀ ದೂರದಲ್ಲಿ ಈ ಮರಿ ಚಿರತೆಗಳು ಸೆರೆಸಿಕ್ಕಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ನಡುವೆ ಸಾವನ್ನಪ್ಪಿದ್ದ ಮಹಿಳೆಯರ ಕುಟುಂಬಸ್ಥರನ್ನು ಅರಣ್ಯ ಸಚಿವ ಆನಂತ್ ಸಿಂಗ್ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉಗ್ರರ ವಿರುದ್ಧ 'ಪ್ರಹಾರ್' ನಿರ್ಣಾಯಕ: ಕೇಂದ್ರದಿಂದ ದೇಶದ ಮೊದಲ ಭಯೋತ್ಪಾದನಾ ವಿರೋಧಿ ನೀತಿ ಬಿಡುಗಡೆ!

ರನ್ ರೇಟ್ ಹೆಚ್ಚಿಸಿಕೊಳ್ಳಲು ಜಿಂಬಾಬ್ವೆ ವಿರುದ್ಧ ದಾಖಲೆಯ 254 ರನ್ ಸಿಡಿಸಿದ ವೆಸ್ಟ್ ಇಂಡೀಸ್, ಭಾರತಕ್ಕೆ ಕಂಟಕ!

T20 World Cup 2026: ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ಗೆ 107 ರನ್ ಗಳ ಭರ್ಜರಿ ಜಯ

ವಿಬಿ ಜಿ ರಾಮ್ ಜಿಯಿಂದ 16.12 ಕೋಟಿ ಜನ ನಿರುದ್ಯೋಗಿಗಳು; ಮನರೇಗಾ ಮರುಜಾರಿಗೊಳಿಸುವವರೆಗೆ ಹೋರಾಟ

IDFC First Bank ವಂಚನೆ ಪ್ರಕರಣ: ತನಿಖೆಗೆ ಆದೇಶಿಸಿದ ಹರಿಯಾಣ CM ಸೈನಿ

SCROLL FOR NEXT