ಹ್ಯಾರಿಸ್ 
ರಾಜ್ಯ

ರಂಜಾನ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿ: ಸಿಎಂ ಗೆ ಶಾಸಕ ಹ್ಯಾರಿಸ್ ಮನವಿ

ರಂಜಾನ್ ನಿಮಿತ್ತ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಾಸಕ ಹ್ಯಾರಿ ಪತ್ರ ಬರೆದಿದ್ದಾರೆ. ಮುಸ್ಲಿಂ ಬಾಂಧವರು ಚಂದ್ರ ದರ್ಶನ ನಂತರ ಮೇ 24 ಅಥವಾ 25ರಂದು ಈದುರ್ ಫಿತರ್/ ರಂಜಾನ್ ಹಬ್ಬವನ್ನು ಆಚರಿಸುತ್ತಿದ್ದಾರೆ. 

ಬೆಂಗಳೂರು: ರಂಜಾನ್ ನಿಮಿತ್ತ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಾಸಕ ಹ್ಯಾರಿ ಪತ್ರ ಬರೆದಿದ್ದಾರೆ. ಮುಸ್ಲಿಂ ಬಾಂಧವರು ಚಂದ್ರ ದರ್ಶನ ನಂತರ ಮೇ 24 ಅಥವಾ 25ರಂದು ಈದುರ್ ಫಿತರ್/ ರಂಜಾನ್ ಹಬ್ಬವನ್ನು ಆಚರಿಸುತ್ತಿದ್ದಾರೆ. 

ರಂಜಾನ್ ಹಬ್ಬದ ದಿನದಂದು ಮುಸ್ಲಿಂ ಬಾಂಧವರು ವಿಶೇಷ ಪ್ರಾರ್ಥನೆ ಮಾಡುತ್ತಾರೆ. ಹೀಗಾಗಿ ಈದ್ಗಾ ಮೈದಾನಗಳಲ್ಲಿ ಅಥವಾ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಮಾಡಿಕೊಡಬೇಕು ಎಂದು ಪತ್ರದಲ್ಲಿ ವಿನಂತಿಸಿಕೊಂಡಿದ್ದಾರೆ.

ತಜ್ಞರು ಮತ್ತು ವೈದ್ಯರ ಸಲಹೆಯನ್ನು ಪಡೆದು ಪರಿಸ್ಥಿತಿ ಅನುಕೂಲಕರವಾಗಿದ್ದರೆ ಮಾತ್ರ ರಂಜಾನ್ ದಿನದಂದು ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ. ಸಿಎಂ ಇಬ್ರಾಹಿಂ ಅವರ ಪತ್ರಕ್ಕೆ ಕಾಂಗ್ರೆಸ್‍ನ ಮುಸ್ಲಿಂ ಮುಖಂಡರೇ ವಿರೋಧ ವ್ಯಕ್ತಪಡಿಸಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಹೀಗಿದ್ದರೂ ಶಾಸಕ ಹ್ಯಾರಿಸ್ ಅವರು ಸಾಮೂಹಿಕ ಪ್ರಾರ್ಥನೆಗೆ ಪತ್ರ ಬರೆದಿರುವುದು ಚರ್ಚೆಗೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಸಾಲದ ಹೊರೆ! ಆದರೆ, ಇನ್ನೂ ಅಪಾಯದ ಗಂಟೆ ಮೊಳಗಿಲ್ಲ ಏಕೆ? ಇಲ್ಲಿದೆ ಮಾಹಿತಿ...

ಭಾರತಕ್ಕೆ ಮೆಹುಲ್ ಚೋಕ್ಸಿ ಹಸ್ತಾಂತರ ಮುಂದೂಡಿಕೆ: 'ಸುಪ್ರೀಂ'ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಹೊಸ ತಂತ್ರ!

ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ: ಈಗಿನ ಸಿನಿಮಾಗಳಲ್ಲಿ ಸಾಮಾಜಿಕ ಕಾಳಜಿ, ಗುಣಮಟ್ಟ ಕ್ಷೀಣ- ಸಿಎಂ ಸಿದ್ದರಾಮಯ್ಯ

ಭಾರತದಲ್ಲಿ ಕುಟುಂಬ ರಾಜಕೀಯ ಜನ್ಮಸಿದ್ಧ ಹಕ್ಕು ಎನ್ನುವಂತಾಗಿದೆ: ಶಶಿ ತರೂರ್

ತೆಲಂಗಾಣ ಅಪಘಾತ: ರೈಲು ತಪ್ಪಿದ್ದಕ್ಕೆ ಯಮಸ್ವರೂಪಿ ಬಸ್ ಹತ್ತಿದ ಮೂವರು ಸಹೋದರಿಯರು ದುರಂತ ಸಾವು!

SCROLL FOR NEXT