ಸಂಗ್ರಹ ಚಿತ್ರ 
ರಾಜ್ಯ

1 ಲಕ್ಷ ವಲಸೆ ಕಾರ್ಮಿಕರು ರಾಜ್ಯದಿಂದ ತವರಿಗೆ ಶ್ರಮಿಕ್ ರೈಲಿನಲ್ಲಿ ಪ್ರಯಾಣ

ನಗರದಲ್ಲಿರುವ ವಲಸೆ ಕಾರ್ಮಿಕರನ್ನು ಭಾನುವಾರವೂ ಅವರ ಸ್ವಂತ ಊರುಗಳಿಗೆ ಶ್ರಮಿಕ್ ರೈಲುಗಳಲ್ಲಿ ಕಳುಹಿಸಿಕೊಡಲಾಯಿತು. ಚಿಕ್ಕಬಾಣಾವರ ರೈಲು ನಿಲ್ದಾಣದಿಂದ 1,511 ಮಂದಿ ಕಾರ್ಮಿಕರು ತವರೂರಿನತ್ತ ಪ್ರಯಾಣ ಬೆಳೆಸಿದರು. 

ಬೆಂಗಳೂರು: ನಗರದಲ್ಲಿರುವ ವಲಸೆ ಕಾರ್ಮಿಕರನ್ನು ಭಾನುವಾರವೂ ಅವರ ಸ್ವಂತ ಊರುಗಳಿಗೆ ಶ್ರಮಿಕ್ ರೈಲುಗಳಲ್ಲಿ ಕಳುಹಿಸಿಕೊಡಲಾಯಿತು. ಚಿಕ್ಕಬಾಣಾವರ ರೈಲು ನಿಲ್ದಾಣದಿಂದ 1,511 ಮಂದಿ ಕಾರ್ಮಿಕರು ತವರೂರಿನತ್ತ ಪ್ರಯಾಣ ಬೆಳೆಸಿದರು. 

ಕೇಂದ್ರ ಸರ್ಕಾರದ ಆದೇಶದತೆ ನಗರದಲ್ಲಿರುವ ಕಾರ್ಮಿಕರು ಸೇವಾ ಸಿಂಧು ವ್ಯವಸ್ಥೆಯಲ್ಲಿ ಹೆಸರು ನೋಂದಾಯಿಸಿ ಊರಿಗೆ ಹೊರಟಿದ್ದಾರೆ. ಕೆಲಸ ಅರಸಿಕೊಂಡು ನಗರಕ್ಕೆ ಬಂದಿದ್ದ ಮಧ್ಯಪ್ರದೇಶ, ಜೈಪುರ, ರಾಜಸ್ತಾನದ ಕಾರ್ಮಿಕರು ಲಾಕ್'ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದರು. ಅವರನ್ನು ಹಂತ ಹಂತವಾಗಿ ವಿಶೇಷ ರೈಲಿನ ಮೂಲಕ ತವರಿಗೆ ಕಳುಹಿಸಲಾಗುತ್ತಿದೆ. ಬಿಎಂಟಿಸಿ ಬಸ್ ಗಳಲ್ಲಿ ಕಾರ್ಮಿಕರನ್ನು ಚಿಕ್ಕಬಾಣಾವರ ರೈಲು ನಿಲ್ದಾಣಕ್ಕೆ ಕರೆತಂದು ರೈಲಿಗೆ ಹತ್ತಿಸಲಾಗುತ್ತಿದೆ.
 
ಈ ವರೆಗೂ 73 ಶ್ರಮಿಕ ವಿಶೇಷ ರೈಲುಗಳ ಮೂಲಕ ಬೆಂಗಳೂರು, ಹುಬ್ಬಳ್ಳಿ ಹಾಗೂ ಮೈಸೂರು ರೈಲ್ವೇ ನಿಲ್ದಾಣಗಳಲ್ಲಿ ಸುಮಾರು 1,01,370 ವಲಸೆ ಕಾರ್ಮಿಕರನ್ನು ಅವರ ತವರಿಗೆ ಕಳುಹಿಸಿಕೊಡಲಾಗಿದೆ. 

ಮೇ.3 ರಿಂದ ಮೊದಲ ರೈಲು ವಲಸೆ ಕಾರ್ಮಿಕರನ್ನು ಹೊತ್ತು ತೆರಳಿತ್ತು. ಇದಾದ ಬಳಿಕ ಎರಡು ದಿನಗಳ ಕಾಲ ವಿರಾಮ ನೀಡಿ, ಮತ್ತೆ ವಲಸೆ ಕಾರ್ಮಿಕರನ್ನು ತವರಿಗೆ ಕಳುಹಿಸುವ ಕಾರ್ಯವನ್ನು ಆರಂಭಿಸಲಾಗಿತ್ತು. ಇದರಂತೆ ಮೇ.17ರವರೆಗೂ ಒಟ್ಟು 1 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ಅವರವರ ತವರಿಗೆ ಕಳುಹಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ