ಸಂಗ್ರಹ ಚಿತ್ರ 
ರಾಜ್ಯ

1 ಲಕ್ಷ ವಲಸೆ ಕಾರ್ಮಿಕರು ರಾಜ್ಯದಿಂದ ತವರಿಗೆ ಶ್ರಮಿಕ್ ರೈಲಿನಲ್ಲಿ ಪ್ರಯಾಣ

ನಗರದಲ್ಲಿರುವ ವಲಸೆ ಕಾರ್ಮಿಕರನ್ನು ಭಾನುವಾರವೂ ಅವರ ಸ್ವಂತ ಊರುಗಳಿಗೆ ಶ್ರಮಿಕ್ ರೈಲುಗಳಲ್ಲಿ ಕಳುಹಿಸಿಕೊಡಲಾಯಿತು. ಚಿಕ್ಕಬಾಣಾವರ ರೈಲು ನಿಲ್ದಾಣದಿಂದ 1,511 ಮಂದಿ ಕಾರ್ಮಿಕರು ತವರೂರಿನತ್ತ ಪ್ರಯಾಣ ಬೆಳೆಸಿದರು. 

ಬೆಂಗಳೂರು: ನಗರದಲ್ಲಿರುವ ವಲಸೆ ಕಾರ್ಮಿಕರನ್ನು ಭಾನುವಾರವೂ ಅವರ ಸ್ವಂತ ಊರುಗಳಿಗೆ ಶ್ರಮಿಕ್ ರೈಲುಗಳಲ್ಲಿ ಕಳುಹಿಸಿಕೊಡಲಾಯಿತು. ಚಿಕ್ಕಬಾಣಾವರ ರೈಲು ನಿಲ್ದಾಣದಿಂದ 1,511 ಮಂದಿ ಕಾರ್ಮಿಕರು ತವರೂರಿನತ್ತ ಪ್ರಯಾಣ ಬೆಳೆಸಿದರು. 

ಕೇಂದ್ರ ಸರ್ಕಾರದ ಆದೇಶದತೆ ನಗರದಲ್ಲಿರುವ ಕಾರ್ಮಿಕರು ಸೇವಾ ಸಿಂಧು ವ್ಯವಸ್ಥೆಯಲ್ಲಿ ಹೆಸರು ನೋಂದಾಯಿಸಿ ಊರಿಗೆ ಹೊರಟಿದ್ದಾರೆ. ಕೆಲಸ ಅರಸಿಕೊಂಡು ನಗರಕ್ಕೆ ಬಂದಿದ್ದ ಮಧ್ಯಪ್ರದೇಶ, ಜೈಪುರ, ರಾಜಸ್ತಾನದ ಕಾರ್ಮಿಕರು ಲಾಕ್'ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದರು. ಅವರನ್ನು ಹಂತ ಹಂತವಾಗಿ ವಿಶೇಷ ರೈಲಿನ ಮೂಲಕ ತವರಿಗೆ ಕಳುಹಿಸಲಾಗುತ್ತಿದೆ. ಬಿಎಂಟಿಸಿ ಬಸ್ ಗಳಲ್ಲಿ ಕಾರ್ಮಿಕರನ್ನು ಚಿಕ್ಕಬಾಣಾವರ ರೈಲು ನಿಲ್ದಾಣಕ್ಕೆ ಕರೆತಂದು ರೈಲಿಗೆ ಹತ್ತಿಸಲಾಗುತ್ತಿದೆ.
 
ಈ ವರೆಗೂ 73 ಶ್ರಮಿಕ ವಿಶೇಷ ರೈಲುಗಳ ಮೂಲಕ ಬೆಂಗಳೂರು, ಹುಬ್ಬಳ್ಳಿ ಹಾಗೂ ಮೈಸೂರು ರೈಲ್ವೇ ನಿಲ್ದಾಣಗಳಲ್ಲಿ ಸುಮಾರು 1,01,370 ವಲಸೆ ಕಾರ್ಮಿಕರನ್ನು ಅವರ ತವರಿಗೆ ಕಳುಹಿಸಿಕೊಡಲಾಗಿದೆ. 

ಮೇ.3 ರಿಂದ ಮೊದಲ ರೈಲು ವಲಸೆ ಕಾರ್ಮಿಕರನ್ನು ಹೊತ್ತು ತೆರಳಿತ್ತು. ಇದಾದ ಬಳಿಕ ಎರಡು ದಿನಗಳ ಕಾಲ ವಿರಾಮ ನೀಡಿ, ಮತ್ತೆ ವಲಸೆ ಕಾರ್ಮಿಕರನ್ನು ತವರಿಗೆ ಕಳುಹಿಸುವ ಕಾರ್ಯವನ್ನು ಆರಂಭಿಸಲಾಗಿತ್ತು. ಇದರಂತೆ ಮೇ.17ರವರೆಗೂ ಒಟ್ಟು 1 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ಅವರವರ ತವರಿಗೆ ಕಳುಹಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT