ಸಂಗ್ರಹ ಚಿತ್ರ 
ರಾಜ್ಯ

ಚಿಕ್ಕಮಗಳೂರಿನಲ್ಲಿ ಐದು ಕೊರೋನಾ ಪ್ರಕರಣ ಪತ್ತೆ; ಹಸಿರು ವಲಯಕ್ಕೆ ಶಾಕ್!

ರಾಜ್ಯದಲ್ಲಿ ಹಸಿರು ವಲಯವಾಗಿ ಉಳಿದುಕೊಂಡಿದ್ದ ಜಿಲ್ಲೆ ಚಿಕ್ಕಮಗಳೂರಿಗೆ ಕೂಡ ಈಗ ಕೊರೋನಾ ವಕ್ಕರಿಸಿದೆ.

ಚಿಕ್ಕಮಗಳೂರು: ರಾಜ್ಯದೆಲ್ಲೆಡೆ ಕೊರೋನಾ ಸೋಂಕು ಕಾಣಿಸಿಕೊಂಡರೂ ಒಂದೇ ಪ್ರಕರಣವಿಲ್ಲದೆ ಹಸಿರು ವಲಯವಾಗಿ ಉಳಿದುಕೊಂಡಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಐದು ಹೊಸ ಪ್ರಕರಣಗಳು ವರದಿಯಾಗಿದೆ. 

ಜಿಲ್ಲೆಯ ಕೊಪ್ಪದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಮೂವರಿಗೆ ಕೋವಿಡ್-19 ಪತ್ತೆಯಾಗಿದೆ, ಜೊತೆಗೆ, ಇತರ ಭಾಗಗಳಲ್ಲಿದ್ದ ಇಬ್ಬರಿಗೂ ಸೋಂಕು ದೃಢಪಟ್ಟಿದೆ.

ಮುಂಬೈನಿಂದ ಮರಳಿದ್ದ ಎನ್.ಆರ್.ಪುರ ತಾಲ್ಲೂಕಿನ ಕೆರೆಗದ್ದೆಯ ಮೂವರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ 7 ಮತ್ತು 10 ವರ್ಷದ ಬಾಲಕ, 17 ವರ್ಷದ ಯುವತಿಗೆ ಕೋವಿಡ್ ದೃಢಪಟ್ಟಿದೆ.

ತರೀಕೆರೆಯ 27 ವರ್ಷದ ಗರ್ಭಿಣಿ ಮತ್ತು ಮೂಡಿಗೆರೆಯ 43 ವರ್ಷ ವೈದ್ಯಾಧಿಕಾರಿಗೆ ಸೋಂಕು ದೃಢಪಟ್ಟಿದೆ.

ಸದ್ಯ ರಾಜ್ಯದಲ್ಲಿ ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳು ಮಾತ್ರ ಹಸಿರು ವಲಯಗಳಾಗಿ ಉಳಿದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT