ಸಂಗ್ರಹ ಚಿತ್ರ 
ರಾಜ್ಯ

ಚಿಕ್ಕಮಗಳೂರಿನಲ್ಲಿ ಐದು ಕೊರೋನಾ ಪ್ರಕರಣ ಪತ್ತೆ; ಹಸಿರು ವಲಯಕ್ಕೆ ಶಾಕ್!

ರಾಜ್ಯದಲ್ಲಿ ಹಸಿರು ವಲಯವಾಗಿ ಉಳಿದುಕೊಂಡಿದ್ದ ಜಿಲ್ಲೆ ಚಿಕ್ಕಮಗಳೂರಿಗೆ ಕೂಡ ಈಗ ಕೊರೋನಾ ವಕ್ಕರಿಸಿದೆ.

ಚಿಕ್ಕಮಗಳೂರು: ರಾಜ್ಯದೆಲ್ಲೆಡೆ ಕೊರೋನಾ ಸೋಂಕು ಕಾಣಿಸಿಕೊಂಡರೂ ಒಂದೇ ಪ್ರಕರಣವಿಲ್ಲದೆ ಹಸಿರು ವಲಯವಾಗಿ ಉಳಿದುಕೊಂಡಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಐದು ಹೊಸ ಪ್ರಕರಣಗಳು ವರದಿಯಾಗಿದೆ. 

ಜಿಲ್ಲೆಯ ಕೊಪ್ಪದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಮೂವರಿಗೆ ಕೋವಿಡ್-19 ಪತ್ತೆಯಾಗಿದೆ, ಜೊತೆಗೆ, ಇತರ ಭಾಗಗಳಲ್ಲಿದ್ದ ಇಬ್ಬರಿಗೂ ಸೋಂಕು ದೃಢಪಟ್ಟಿದೆ.

ಮುಂಬೈನಿಂದ ಮರಳಿದ್ದ ಎನ್.ಆರ್.ಪುರ ತಾಲ್ಲೂಕಿನ ಕೆರೆಗದ್ದೆಯ ಮೂವರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ 7 ಮತ್ತು 10 ವರ್ಷದ ಬಾಲಕ, 17 ವರ್ಷದ ಯುವತಿಗೆ ಕೋವಿಡ್ ದೃಢಪಟ್ಟಿದೆ.

ತರೀಕೆರೆಯ 27 ವರ್ಷದ ಗರ್ಭಿಣಿ ಮತ್ತು ಮೂಡಿಗೆರೆಯ 43 ವರ್ಷ ವೈದ್ಯಾಧಿಕಾರಿಗೆ ಸೋಂಕು ದೃಢಪಟ್ಟಿದೆ.

ಸದ್ಯ ರಾಜ್ಯದಲ್ಲಿ ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳು ಮಾತ್ರ ಹಸಿರು ವಲಯಗಳಾಗಿ ಉಳಿದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ರಕ್ಷಾ ಬಂಧನದ ಇತಿಹಾಸ ಏನು? ಸಹೋದರರಿಗೆ ರಾಖಿ ಕಟ್ಟುವುದರ ಮಹತ್ವ ತಿಳಿದುಕೊಳ್ಳಿ!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು