ಸಂಗ್ರಹ ಚಿತ್ರ 
ರಾಜ್ಯ

ಚಿಕ್ಕಮಗಳೂರಿನಲ್ಲಿ ಐದು ಕೊರೋನಾ ಪ್ರಕರಣ ಪತ್ತೆ; ಹಸಿರು ವಲಯಕ್ಕೆ ಶಾಕ್!

ರಾಜ್ಯದಲ್ಲಿ ಹಸಿರು ವಲಯವಾಗಿ ಉಳಿದುಕೊಂಡಿದ್ದ ಜಿಲ್ಲೆ ಚಿಕ್ಕಮಗಳೂರಿಗೆ ಕೂಡ ಈಗ ಕೊರೋನಾ ವಕ್ಕರಿಸಿದೆ.

ಚಿಕ್ಕಮಗಳೂರು: ರಾಜ್ಯದೆಲ್ಲೆಡೆ ಕೊರೋನಾ ಸೋಂಕು ಕಾಣಿಸಿಕೊಂಡರೂ ಒಂದೇ ಪ್ರಕರಣವಿಲ್ಲದೆ ಹಸಿರು ವಲಯವಾಗಿ ಉಳಿದುಕೊಂಡಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಐದು ಹೊಸ ಪ್ರಕರಣಗಳು ವರದಿಯಾಗಿದೆ. 

ಜಿಲ್ಲೆಯ ಕೊಪ್ಪದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಮೂವರಿಗೆ ಕೋವಿಡ್-19 ಪತ್ತೆಯಾಗಿದೆ, ಜೊತೆಗೆ, ಇತರ ಭಾಗಗಳಲ್ಲಿದ್ದ ಇಬ್ಬರಿಗೂ ಸೋಂಕು ದೃಢಪಟ್ಟಿದೆ.

ಮುಂಬೈನಿಂದ ಮರಳಿದ್ದ ಎನ್.ಆರ್.ಪುರ ತಾಲ್ಲೂಕಿನ ಕೆರೆಗದ್ದೆಯ ಮೂವರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ 7 ಮತ್ತು 10 ವರ್ಷದ ಬಾಲಕ, 17 ವರ್ಷದ ಯುವತಿಗೆ ಕೋವಿಡ್ ದೃಢಪಟ್ಟಿದೆ.

ತರೀಕೆರೆಯ 27 ವರ್ಷದ ಗರ್ಭಿಣಿ ಮತ್ತು ಮೂಡಿಗೆರೆಯ 43 ವರ್ಷ ವೈದ್ಯಾಧಿಕಾರಿಗೆ ಸೋಂಕು ದೃಢಪಟ್ಟಿದೆ.

ಸದ್ಯ ರಾಜ್ಯದಲ್ಲಿ ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳು ಮಾತ್ರ ಹಸಿರು ವಲಯಗಳಾಗಿ ಉಳಿದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT