ಹೈಕೋರ್ಟ್ 
ರಾಜ್ಯ

ನಮಗೂ ಪರಿಹಾರ ನೀಡಿ: ಹೈಕೋರ್ಟ್ ಮೆಟ್ಟಿಲೇರಿದ ಅರ್ಚಕರು

ರಾಜ್ಯದ ದೇಗುಲಗಳಲ್ಲಿ ಕಾರ್ಯ  ನಿರ್ವಹಿಸುವ ಅರ್ಚಕರಿಗೆ ಪರಿಹಾರ ನೀಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಹೈಕೋರ್ಟ್ ಮೊರೆ ಹೋಗಿದ್ದರ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಕರ್ನಾಟಕ ಉಚ್ಛ ನ್ಯಾಯಾಲಯ ನೊಟೀಸ್ ಜಾರಿಗೊಳಿಸಿದೆ.

ಬೆಂಗಳೂರು: ರಾಜ್ಯದ ದೇಗುಲಗಳಲ್ಲಿ ಕಾರ್ಯ ನಿರ್ವಹಿಸುವ ಅರ್ಚಕರಿಗೆ ಪರಿಹಾರ ನೀಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಹೈಕೋರ್ಟ್ ಮೊರೆ ಹೋಗಿದ್ದರ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಕರ್ನಾಟಕ ಉಚ್ಛ ನ್ಯಾಯಾಲಯ ನೊಟೀಸ್ ಜಾರಿಗೊಳಿಸಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ  ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಅವರಿದ್ದ ವಿಭಾಗೀಯ ಪೀಠ ನೊಟೀಸ್ ನೀಡಿದೆ. ಅರ್ಚಕರಿಗೆ ದೇವರ ಪೂಜೆಗೆ ಹಣ ನೀಡದೇ ಇರುವುದು ದೇವಾಲಯಗಳ ವ್ಯವಸ್ಥೆಗೆ ದೊಟ್ಟ ಪೆಟ್ಟುಕೊಟ್ಟಂತಾಗಿದೆ ಎಂದು ಶ್ರೀಹರಿ ಕುತ್ಸಾರ ಪಿಐಎಲ್ ಸಲ್ಲಿಸಿದ್ದರು.

ರಾಜ್ಯದಲ್ಲಿ ಸುಮಾರು 35,500 ದೇಗುಲಗಳಿದ್ದು ಅವುಗಳನ್ನು ಎ ಮತ್ತು ಬಿ ಹಾಗೂ ಸಿ ವರ್ಗಗಳಾಗಿ ವಿಂಗಡಿಸಲಾಗಿದೆ. ರಾಜ್ಯ ಸರ್ಕಾರ 327.39 ಕೋಟಿ ರು. ಅನುದಾನ ನೀಡಿದೆ. ಸಿ ಕೆಟಗರಿ ದೇವಾಲಯಗಳ ಅರ್ಚಕರಿಗೆ ಯಾವುದೇ ವೇತನ ಇರುವುದಿಲ್ಲ ಹೀಗಾಗಿ ಅವರಿಗೆ ಪರಿಹಾರ ನೀಡಬೇಕು ಎಂದು ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT