ಸಂಗ್ರಹ ಚಿತ್ರ 
ರಾಜ್ಯ

ಗ್ರಾಹಕರಿಗೆ ಟೋಕನ್ ವಿತರಿಸಿ: ಸಲೂನ್, ಪಾರ್ಲರ್ ಮಾಲೀಕರಿಗೆ ಸರ್ಕಾರ ಸೂಚನೆ

ಸರ್ಕಾರದಿಂದ ಅನುಮತಿ ದೊರೆತ ಹಿನ್ನೆಲೆಯಲ್ಲಿ 58 ದಿನ ಬಂದ್ ಆಗಿದ್ದ ನಗರದ ಸಲೂನ್, ಪಾರ್ಲರ್'ಗಳು ಮಂಗಳವಾರ ಎಂದಿನಂತೆ ತನ್ನ ಕಾರ್ಯಗಳನ್ನು ಆರಂಭಿಸಿವೆ. ಈ ನಡುವಲ್ಲೇ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿರುವ ಸರ್ಕಾರ ಸಲೂನ್ ಹಾಗೂ ಪಾರ್ಲರ್ ಗಳಿಗೆ ನಿಯಮಗಳನ್ನು ವಿಧಿಸಿದೆ. 

ಬೆಂಗಳೂರು: ಸರ್ಕಾರದಿಂದ ಅನುಮತಿ ದೊರೆತ ಹಿನ್ನೆಲೆಯಲ್ಲಿ 58 ದಿನ ಬಂದ್ ಆಗಿದ್ದ ನಗರದ ಸಲೂನ್, ಪಾರ್ಲರ್'ಗಳು ಮಂಗಳವಾರ ಎಂದಿನಂತೆ ತನ್ನ ಕಾರ್ಯಗಳನ್ನು ಆರಂಭಿಸಿವೆ. ಈ ನಡುವಲ್ಲೇ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿರುವ ಸರ್ಕಾರ ಸಲೂನ್ ಹಾಗೂ ಪಾರ್ಲರ್ ಗಳಿಗೆ ನಿಯಮಗಳನ್ನು ವಿಧಿಸಿದೆ. 

ಹಲವು ಅಂಶಗಳುಳ್ಳ ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆಗೊಳಿಸಿದ್ದು, ಅವುಗಳು ಇಂತಿವೆ...

  • ಅಂಗಡಿ ಪ್ರವೇಶ ದ್ವಾರದಲ್ಲಿ ಕಡ್ಡಾಯವಾಗಿ ಸ್ಯಾನಿಟೈಸರ್ ಇಟ್ಟಿರಬೇಕು.
  • ಅಂಗಡಿಯ ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್, ತಲೆಗವಸು ಮತ್ತು ಎಪ್ರಾನ್ ಧರಿಸಬೇಕು. 
  • ಜ್ವರ, ಶೀತ, ಕೆಮ್ಮು ಮತ್ತು ಗಂಟಲು ನೋವು ಇರುವವರಿಗೆ ಅಂಗಡಿ ಪ್ರವೇಶಕ್ಕೆ ಅವಕಾಶ ನೀಡಬಾರದು. 
  • ಮಾಸ್ಕ್ ಧರಿಸದೆ ಬರುವ ಗ್ರಾಹಕರಿಗೆ ಪ್ರವೇಶ ನೀಡಬಾರದು. 
  • ಒಬ್ಬ ಗ್ರಾಹಕನಿಗೆ ಬಳಸಿದ ಟವಲ್, ಪೇಪರ್ ಶೀಟ್'ನ್ನು ಬೇರೊಬ್ಬರಿಗೆ ಬಳಸುವಂತಿಲ್ಲ. 
  • ಪ್ರತೀ ಗ್ರಾಹಕನಿಗೆ ಕ್ಷೌರ ಮಾಡಿದ ಬಳಿಕ ಸಿಬ್ಬಂದಿ ಹ್ಯಾಂಡ್ ವಾಷ್ ಮಾಡಿಕೊಳ್ಳಬೇಕು. 
  • ಒಬ್ಬ ಗ್ರಾಹಕನಿಗೆ ಬಳಸಿದ ವಸ್ತುಗಳನ್ನು ಮತ್ತೊಬ್ಬರಿಗೆ ಬಳಸುವುದಕ್ಕೂ ಮುನ್ನ ಶೇ.7ರಷ್ಟು ಲೈಸಾಲ್ ಹಾಗಿ 30 ನಿಮಿಷಗಳ ಕಾಲ ನೆನೆಸಿ ಶುದ್ಧ ಮಾಡಿದ ಬಳಿಕವಶ್ಟೇ ಬಳಕೆ ಮಾಡಬೇಕು. 
  • ಸಲೂನ್ ಹಾಗೂ ಪಾರ್ಲರ್ ಗಳು ಬಳಸುವ ವಸ್ತುಗಳನ್ನು ದ್ವಿಗುಣಗೊಳಿಸಿಕೊಳ್ಳಬೇಕು. 
  • ಗ್ರಾಹಕರಿಗೆ ಸಲೂನ್ ಹಾಗೂ ಪಾರ್ಲರ್ ಮಾಲೀಕರು ಟೋಕನ್ ಗಳನ್ನು ವಿತರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. 
  • ಒಬ್ಬ ಗ್ರಾಹಕನಿಂದ ಮತ್ತೊಬ್ಬ ಗ್ರಾಹನಿಗೆ ಕನಿಷ್ಟ 1 ಮೀಟರ್ ಆದರೂ ಅಂತರವಿರಬೇಕು. 
  • ಶೇ.1ರಷ್ಟು ಸೋಡಿಯಂ ಹೈಪೋಕ್ಲೋರೈಟ್ ಬಳಕೆ ಮಾಡಿ ಸಲೂನ್, ಪಾರ್ಲರ್ ಗಳ ಎಲ್ಲಾ ಮಹಡಿಗಳು, ಲಿಫ್ಟ್ ಗಳು, ವಿಶ್ರಾಂತಿ ಪ್ರದೇಶಗಳು, ಮೆಟ್ಟಿಲುಗಳು ಮತ್ತು ಹ್ಯಾಂಡ್ರೈಲ್‌ಗಳನ್ನು ದಿನಕ್ಕೆರಡು ಬಾರಿ ಸ್ವಚ್ಛಗೊಳಿಸಬೇಕು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT