ಸಂಗ್ರಹ ಚಿತ್ರ 
ರಾಜ್ಯ

ಗ್ರಾಹಕರಿಗೆ ಟೋಕನ್ ವಿತರಿಸಿ: ಸಲೂನ್, ಪಾರ್ಲರ್ ಮಾಲೀಕರಿಗೆ ಸರ್ಕಾರ ಸೂಚನೆ

ಸರ್ಕಾರದಿಂದ ಅನುಮತಿ ದೊರೆತ ಹಿನ್ನೆಲೆಯಲ್ಲಿ 58 ದಿನ ಬಂದ್ ಆಗಿದ್ದ ನಗರದ ಸಲೂನ್, ಪಾರ್ಲರ್'ಗಳು ಮಂಗಳವಾರ ಎಂದಿನಂತೆ ತನ್ನ ಕಾರ್ಯಗಳನ್ನು ಆರಂಭಿಸಿವೆ. ಈ ನಡುವಲ್ಲೇ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿರುವ ಸರ್ಕಾರ ಸಲೂನ್ ಹಾಗೂ ಪಾರ್ಲರ್ ಗಳಿಗೆ ನಿಯಮಗಳನ್ನು ವಿಧಿಸಿದೆ. 

ಬೆಂಗಳೂರು: ಸರ್ಕಾರದಿಂದ ಅನುಮತಿ ದೊರೆತ ಹಿನ್ನೆಲೆಯಲ್ಲಿ 58 ದಿನ ಬಂದ್ ಆಗಿದ್ದ ನಗರದ ಸಲೂನ್, ಪಾರ್ಲರ್'ಗಳು ಮಂಗಳವಾರ ಎಂದಿನಂತೆ ತನ್ನ ಕಾರ್ಯಗಳನ್ನು ಆರಂಭಿಸಿವೆ. ಈ ನಡುವಲ್ಲೇ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿರುವ ಸರ್ಕಾರ ಸಲೂನ್ ಹಾಗೂ ಪಾರ್ಲರ್ ಗಳಿಗೆ ನಿಯಮಗಳನ್ನು ವಿಧಿಸಿದೆ. 

ಹಲವು ಅಂಶಗಳುಳ್ಳ ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆಗೊಳಿಸಿದ್ದು, ಅವುಗಳು ಇಂತಿವೆ...

  • ಅಂಗಡಿ ಪ್ರವೇಶ ದ್ವಾರದಲ್ಲಿ ಕಡ್ಡಾಯವಾಗಿ ಸ್ಯಾನಿಟೈಸರ್ ಇಟ್ಟಿರಬೇಕು.
  • ಅಂಗಡಿಯ ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್, ತಲೆಗವಸು ಮತ್ತು ಎಪ್ರಾನ್ ಧರಿಸಬೇಕು. 
  • ಜ್ವರ, ಶೀತ, ಕೆಮ್ಮು ಮತ್ತು ಗಂಟಲು ನೋವು ಇರುವವರಿಗೆ ಅಂಗಡಿ ಪ್ರವೇಶಕ್ಕೆ ಅವಕಾಶ ನೀಡಬಾರದು. 
  • ಮಾಸ್ಕ್ ಧರಿಸದೆ ಬರುವ ಗ್ರಾಹಕರಿಗೆ ಪ್ರವೇಶ ನೀಡಬಾರದು. 
  • ಒಬ್ಬ ಗ್ರಾಹಕನಿಗೆ ಬಳಸಿದ ಟವಲ್, ಪೇಪರ್ ಶೀಟ್'ನ್ನು ಬೇರೊಬ್ಬರಿಗೆ ಬಳಸುವಂತಿಲ್ಲ. 
  • ಪ್ರತೀ ಗ್ರಾಹಕನಿಗೆ ಕ್ಷೌರ ಮಾಡಿದ ಬಳಿಕ ಸಿಬ್ಬಂದಿ ಹ್ಯಾಂಡ್ ವಾಷ್ ಮಾಡಿಕೊಳ್ಳಬೇಕು. 
  • ಒಬ್ಬ ಗ್ರಾಹಕನಿಗೆ ಬಳಸಿದ ವಸ್ತುಗಳನ್ನು ಮತ್ತೊಬ್ಬರಿಗೆ ಬಳಸುವುದಕ್ಕೂ ಮುನ್ನ ಶೇ.7ರಷ್ಟು ಲೈಸಾಲ್ ಹಾಗಿ 30 ನಿಮಿಷಗಳ ಕಾಲ ನೆನೆಸಿ ಶುದ್ಧ ಮಾಡಿದ ಬಳಿಕವಶ್ಟೇ ಬಳಕೆ ಮಾಡಬೇಕು. 
  • ಸಲೂನ್ ಹಾಗೂ ಪಾರ್ಲರ್ ಗಳು ಬಳಸುವ ವಸ್ತುಗಳನ್ನು ದ್ವಿಗುಣಗೊಳಿಸಿಕೊಳ್ಳಬೇಕು. 
  • ಗ್ರಾಹಕರಿಗೆ ಸಲೂನ್ ಹಾಗೂ ಪಾರ್ಲರ್ ಮಾಲೀಕರು ಟೋಕನ್ ಗಳನ್ನು ವಿತರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. 
  • ಒಬ್ಬ ಗ್ರಾಹಕನಿಂದ ಮತ್ತೊಬ್ಬ ಗ್ರಾಹನಿಗೆ ಕನಿಷ್ಟ 1 ಮೀಟರ್ ಆದರೂ ಅಂತರವಿರಬೇಕು. 
  • ಶೇ.1ರಷ್ಟು ಸೋಡಿಯಂ ಹೈಪೋಕ್ಲೋರೈಟ್ ಬಳಕೆ ಮಾಡಿ ಸಲೂನ್, ಪಾರ್ಲರ್ ಗಳ ಎಲ್ಲಾ ಮಹಡಿಗಳು, ಲಿಫ್ಟ್ ಗಳು, ವಿಶ್ರಾಂತಿ ಪ್ರದೇಶಗಳು, ಮೆಟ್ಟಿಲುಗಳು ಮತ್ತು ಹ್ಯಾಂಡ್ರೈಲ್‌ಗಳನ್ನು ದಿನಕ್ಕೆರಡು ಬಾರಿ ಸ್ವಚ್ಛಗೊಳಿಸಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT