ಸಾಂದರ್ಭಿಕ ಚಿತ್ರ 
ರಾಜ್ಯ

ಅಕ್ರಮ ಗ್ಯಾಸ್ ರೀಫಿಲಿಂಗ್ ಕೇಂದ್ರದ ಮೇಲೆ ಸಿಸಿಬಿ ಕ್ಷಿಪ್ರ ದಾಳಿ: 6 ಮಂದಿ ಬಂಧನ; 384 ಸಿಲಿಂಡರ್ ವಶ

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಕೇಂದ್ರಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳು, ಆರು ಮಂದಿ ಆರೋಪಿಗಳನ್ನು ಬಂಧಿಸಿ 3.73 ಲಕ್ಷ ರೂ. ಮೌಲ್ಯದ 384 ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಕೇಂದ್ರಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳು, ಆರು ಮಂದಿ ಆರೋಪಿಗಳನ್ನು ಬಂಧಿಸಿ 3.73 ಲಕ್ಷ ರೂ. ಮೌಲ್ಯದ 384 ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಸಿದ್ಧಾರ್ಥ ಲೇಔಟ್‌ನ ನಿವಾಸಿ ರಾಜು (32), ನಾಗರಭಾವಿ ಮಾರುತಿ ನಗರ 1ನೇ ಮೈನ್ ನಿವಾಸಿ ಅಮರ್ ಸಿ.ಎ (32), ಹೆಗ್ಗನಹಳ್ಳಿ ಮುಖ್ಯ ರಸ್ತೆಯ ವಿಶ್ವನೀಡಂ ಅಂಚೆ, ಮೋಹನ್ ಥಿಯೇಟರ್ ಹತ್ತಿರ ನಿವಾಸಿ ಲಕ್ಷ್ಮಯ್ಯ ಎಚ್ , ನಾಗರಬಾವಿ ಅನ್ನಪೂರ್ಣೇಶ್ವರಿ ನಗರ ಚೆಲುವ ನಾರಾಯಣ ಸ್ವಾಮಿ ಪ್ರಸನ್ನ 1ನೇ ಕ್ರಾಸ್ ನಿವಾಸಿ ವಿನಯ್, ಆರ್.ಆರ್.ನಗರ ಹಲಗೆವಡೆರಹಳ್ಳಿ 4ನೆ ಕ್ರಾಸ್ ಸೂರ್ಯ ನಾರಾಯಣ ಸ್ಟೋರ್ಸ್ ನಿವಾಸಿ ಪ್ರಕಾಸ್, (34), ರಾಜಗೋಪಾಲನಗರ ನಿವಾಸಿ ತಿಮ್ಮಪ್ಪ (42) ಬಂಧಿತ ಆರೋಪಿಗಳ

ಬೇರೆ ಬೇರೆ ಪೊಲೀಸ್ ಠಾಣೆಗಳ ವ್ಯಾಪ್ತಿಗಳಲ್ಲಿ ಯಾವುದೇ ಸುರಕ್ಷತೆ ಕ್ರಮಗಳನ್ನು ಅನುಸರಿಸದೆ ಗ್ಯಾಸ್ ಸಿಲಿಂಡರ್‌ಗಳನ್ನು ಅಕ್ರಮವಾಗಿ ರೀಫಿಲ್ಲಿಂಗ್‌ ಮಾಡಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು, ಪೀಣ್ಯ, ಕೆಂಗೇರಿ, ಕಾಮಾಕ್ಷಿಪಾಳ್ಯ, ವಿಜಯನಗರ, ಆರ್‌.ಆರ್.ನಗರ ಹಾಗೂ ರಾಜಗೋಪಾಲ ನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT