ಸಂಗ್ರಹ ಚಿತ್ರ 
ರಾಜ್ಯ

20 ಹಸು, ಮೇಕೆಗಳನ್ನು ಬಲಿ ಪಡೆದಿದ್ದ ಹುಲಿ ಕೊನೆಗೂ ಸೆರೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯ ವ್ಯಾಪ್ತಿಯಲ್ಲಿ ಸುಮಾರು 20 ಹಸು ಹಾಗೂ ಮೇಕೆಗಳನ್ನು ಬಲಿ ಪಡೆದುಕೊಂಡಿದ್ದ ಹುಲಿಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದೆ.

ಬೆಂಗಳೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯ ವ್ಯಾಪ್ತಿಯಲ್ಲಿ ಸುಮಾರು 20 ಹಸು ಹಾಗೂ ಮೇಕೆಗಳನ್ನು ಬಲಿ ಪಡೆದುಕೊಂಡಿದ್ದ ಹುಲಿಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದೆ.

ಮಂಗಳವಾರ ಬೆಳಿಗ್ಗೆಯಿಂದಲೇ ಅರಣ್ಯ ಸಿಬ್ಬಂದಿ ಹಾಗೂ ವೈದ್ಯರು ಆನೆಗಳ ಸಹಾಯದಿಂದ ಹುಲಿಯನ್ನು ಸೆರೆಹಿಡಿಯಲು ಹುಡುಕಾಟ ಆರಂಭಿಸಿದ್ದರು. 

ಇದರಂತೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಅಕ್ರಂ ಎಂಬುವವರು ಹುಲಿಗೆ ಅರವಳಿಕೆ ಚುಚ್ಚುಮದ್ದು ಶೂಟ್ ಮಾಡುವಲ್ಲಿ ಯಶಸ್ವಿಯಾದರು. ಬಳಿಕ ಹುಲಿಯು ಕುಂದುಕೆರೆ ವಲಯದ ಪರಮೇಶ್ವರಪ್ಪ ಅವರ ಜಮೀನಿನ ಬಳಿ ಕೊನೆಗೂ ಸೆರೆಯಾಯಿತು. 

ಹುಲಿ ಆರೋಗ್ಯವಾಗಿದೆ. ಆದರೆ, ಕೋರೆಹಲ್ಲುಗಳಲ್ಲಿ ಕೆಲ ಗಾಯಗಳಾಗಿರುವುುದ ಕಂಡು ಬಂದಿದೆ. ಇದೀಗ ಚಿಕಿತ್ಸೆ ನೀಡಲಾಗುತ್ತಿದ್ದು, ಗುಣಮುಖವಾಗುತ್ತಿದ್ದಂತೆಯೇ ಕಾಡಿಗೆ ಬಿಡುಗಡೆ ಮಾಡಲಾಗುತ್ತದೆ. ಸೆರೆಹಿಡಿದ ಬಳಿಕ ಹುಲಿಗಳನ್ನು ಕಾಡಿಗೆ ಬಿಡುವ ಕೆಲವೇ ಪ್ರಕರಣಗಳಲ್ಲಿ ಇದೂ ಕೂಡ ಒಂದಾಗಿದೆ ಎಂದು ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಅಜಯ್ ಮಿಶ್ರಾ ಅವರು ಹೇಳಿದ್ದಾರೆ. 

ಹುಲಿ ಸೆರೆಹಿಡಿಯಲು ಸಮಿತಿಯನ್ನು ರಚನೆ ಮಾಡಲಾಗಿತ್ತು. ಹುಲಿಯ ಎಲ್ಲಾ ಚಲನವಲನಗಳನ್ನು ಗಮನಿಸಿ, ಪರಿಶೀಲನೆ ನಡೆಸಿದ ಬಳಿಕವೇ ಸೆರೆ ಹಿಡಿಯಲಾಗಿದೆ. ಮೈಸೂರು ಮೃಗಾಲಯದಲ್ಲಿ ಹುಲಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಹಳ ಹತ್ತಿರದಿಂದ ಎಲ್ಲವನ್ನೂ ಗಮನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT