ಸಂಗ್ರಹ ಚಿತ್ರ 
ರಾಜ್ಯ

ಅಧಿಕಾರಿಗಳ ಮಧ್ಯಪ್ರವೇಶ: ಬಳ್ಳಾರಿಯಲ್ಲಿ 3 ಬಾಲ್ಯವಿವಾಹಗಳಿಗೆ ತಡೆ

ಕಂಪ್ಲಿ ತಾಲೂಕಿನ ಅರಳಿಹಳ್ಳಿ ತಾಂಡಾದಲ್ಲಿ ನಡೆಯಲಿದ್ದ 3 ಅಪ್ರಾಪ್ತ ವಯಸ್ಸಿನ‌ ಬಾಲಕೀಯರ ಬಾಲ್ಯವಿವಾಹವನ್ನು ಅಧಿಕಾರಿಗಳು ಸರಿಯಾದ ಸಮಯಕ್ಕೆ ಮಧ್ಯಪ್ರವೇಶಿಸಿದ ಪರಿಣಾಮ ಮದುವೆಗೆ ತಡೆ ಬಿದ್ದಿದೆ.

ಬಳ್ಳಾರಿ: ಕಂಪ್ಲಿ ತಾಲೂಕಿನ ಅರಳಿಹಳ್ಳಿ ತಾಂಡಾದಲ್ಲಿ ನಡೆಯಲಿದ್ದ 3 ಅಪ್ರಾಪ್ತ ವಯಸ್ಸಿನ‌ ಬಾಲಕೀಯರ ಬಾಲ್ಯವಿವಾಹವನ್ನು ಅಧಿಕಾರಿಗಳು ಸರಿಯಾದ ಸಮಯಕ್ಕೆ ಮಧ್ಯಪ್ರವೇಶಿಸಿದ ಪರಿಣಾಮ ಮದುವೆಗೆ ತಡೆ ಬಿದ್ದಿದೆ.

ಹೊಸಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಮರೇಶ ಅವರ ನೇತೃತ್ವದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಂಡವು ಪೊಲೀಸ್ ಇಲಾಖೆಯೊಡಗೂಡಿ ನಡೆಸಿದ ಕಾರ್ಯಾಚರಣೆಯಲ್ಲಿ‌ ಮದುವೆಯನ್ನು ನಿಲ್ಲಿಸಲಾಗಿದೆ. ಮಕ್ಕಳ ಸಹಾಯವಾಣಿಗೆ ಬಂದ ಮಾಹಿತಿ ಅನುಸಾರ ಕಾರ್ಯಪ್ರವೃತ್ತರಾದ ಸಿಡಿಪಿಒ ಅಮರೇಶ ಅವರು, ಗ್ರಾಮಕ್ಕೆ ಭೇಟಿ ನೀಡಿ ಪೋಷಕರಿಗೆ ಕಾನೂನು ತಿಳಿವಳಿಕೆ ನೋಟಿಸ್ ನೀಡಿ ಅವರಿಂದ ಮುಚ್ಚಳಿಕೆ ಬರೆಸಿಕೊಂಡರು.

ಈ ಸಂದರ್ಭದಲ್ಲಿ ಸಿಡಿಪಿಒ ಅಮರೇಶ ಅವರು ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪೋಷಕರಿಗೆ ಮನವರಿಕೆ ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ ಸಂಯೋಜಕ ಚಿದಾನಂದ, ಪೊಲೀಸ್ ಇಲಾಖೆಯ‌ ನಾಗನಗೌಡ ಸೇರಿದಂತೆ ಅನೇಕರು ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT