ಸಾಂದರ್ಭಿಕ ಚಿತ್ರ 
ರಾಜ್ಯ

ದಿನದ ಪಾಸ್ ದರಕ್ಕೆ ಪ್ರಯಾಣಿಕರಿಂದ ತೀವ್ರ ವಿರೋಧ: 50 ರೂ.ಗೆ ಇಳಿಸಲು ಬಿಎಂಟಿಸಿ ಚಿಂತನೆ

ಬೆಂಗಳೂರು ಮಹಾನಗರ ಸಾರಿಗೆ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳ ಸಂಚಾರ ಆರಂಭವಾದ ಖುಷಿಯಲ್ಲಿ ಜನತೆ ಇದ್ದರು.

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳ ಸಂಚಾರ ಆರಂಭವಾದ ಖುಷಿಯಲ್ಲಿ ಜನತೆ ಇದ್ದರು.

ಆದರೆ ಬೆಂಗಳೂರು ಪ್ರಯಾಣಿಕರ ಖುಷಿ ಸ್ವಲ್ಪ ಹೊತ್ತಿನಲ್ಲಿಯೇ ಮಾಯವಾಯಿತು. ಬಿಎಂಟಿಸಿ ಪ್ರಯಾಣಿಕರಿಗೆ ದಿನದ, ವಾರದ ಮತ್ತು ತಿಂಗಳ ಪಾಸನ್ನು ಕಡ್ಡಾಯವಾಗಿ ಮಾಡಿಕೊಳ್ಳಬೇಕೆಂದು ಆದೇಶ ಹೊರಡಿಸಿತು. ದಿನದ ಪಾಸಿನ ಮೊತ್ತ 70 ರೂಪಾಯಿ, ಹತ್ತಿರದ ಸ್ಥಳಗಳಿಗೆ ಹೋಗುವ ಪ್ರಯಾಣಿಕರಿಗೆ 70 ರೂಪಾಯಿ ಟಿಕೆಟ್ ಅಗತ್ಯವೂ ಇರುವುದಿಲ್ಲ, ದರ ದುಬಾರಿಯಾಯಿತೆಂದು ಆರೋಪಿಸಿದರು.

ಪ್ರಯಾಣಿಕರಿಂದ ಬಂದ ಟೀಕೆ, ಆರೋಪಗಳಿಂದ ಇದೀಗ ಬಿಎಂಟಿಸಿ 70ರೂಪಾಯಿಯಿಂದ ಟಿಕೆಟ್ ದರವನ್ನು 50 ರೂಪಾಯಿಗೆ ಇಳಿಸಲು ಮುಂದಾಗಿದೆ. ದಿನದ ಪಾಸಿಗೆ 50 ರೂಪಾಯಿ ನಿಗದಿಪಡಿಸಲಾಗುವುದು ಎಂದು ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಈ ಬಗ್ಗೆ ಮಾತುಕತೆ ಹಂತದಲ್ಲಿದೆ.

ನಗರದಲ್ಲಿ ಸುಮಾರು 2 ಸಾವಿರ ಬಸ್ಸುಗಳು ಸಂಚರಿಸುತ್ತಿದ್ದು ಇಂದು ಅದು 4 ಸಾವಿರಕ್ಕೆ ಹೆಚ್ಚಳವಾಗುವ ಸಾಧ್ಯತೆಯಿದೆ. ಮೈಬಿಎಂಟಿಸಿ ಆಪ್ ಮೂಲಕ ಆನ್ ಲೈ ನ್ ನಲ್ಲಿ ಟಿಕೆಟ್ ನೀಡಲು ಕ್ಯುಆರ್ ಕೋಡ್ ತಪಾಸಣೆಗೆ ಬಿಎಂಟಿಸಿ ಆರಂಭಿಸಿದ್ದು ಇದುವರೆಗೆ ಶೇಕಡಾ 10ರಷ್ಟು ಪ್ರಯಾಣಿಕರು ಮಾತ್ರ ಬಳಸಿದ್ದಾರೆ. ಬಿಎಂಟಿಸಿ ಇ ಟಿಕೆಟ್ ವ್ಯವಸ್ಥೆಯನ್ನು ಕೂಡ ಚಿಂತನೆ ನಡೆಸುತ್ತಿದೆ.

ನಿನ್ನೆ ಕೆಎಸ್ ಆರ್ ಟಿಸಿ ಬಸ್ಸಿನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿತ್ತು. ಕೆಂಪೇಗೌಡ ಬಸ್ ನಿಲ್ದಾಣದಿಂದ ನಿನ್ನೆ 7,273 ಪ್ರಯಾಣಿಕರು ಸಂಚರಿಸಿದ್ದಾರೆ. ರಾಜ್ಯದ 63 ಕಡೆಗಳಲ್ಲಿ ಬಸ್ ಕಾರ್ಯನಿರ್ವಹಣೆ ಮಾಡಿದ್ದು 789 ಪ್ರಯಾಣಿಕರು ಶಿವಮೊಗ್ಗಕ್ಕೆ 33 ಬಸ್ಸುಗಳಲ್ಲಿ ಹೋಗಿದ್ದಾರೆ, ಅದು ನಿನ್ನೆಯ ದಿನ ಅಧಿಕವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT