ಅಮೂಲ್ಯ ಲಿಯೋನಾ 
ರಾಜ್ಯ

ದೇಶದ್ರೋಹ ಪ್ರಕರಣ: ಅಮೂಲ್ಯ ಲಿಯೋನಾ ಜಾಮೀನು ಅರ್ಜಿಗೆ ಪೊಲೀಸರ ವಿರೋಧ

ಪಾಕಿಸ್ತಾನ ಪರ ಘೋಷಣೆ ಕೂಗಿ ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಅಮೂಲ್ಯ ಲಿಯೋನಾ ಸಲ್ಲಿಸಿರುವ ಜಾಮೀನು ಅರ್ಜಿಗೆ ನಗರ ಪೊಲೀಸರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿ ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಅಮೂಲ್ಯ ಲಿಯೋನಾ ಸಲ್ಲಿಸಿರುವ ಜಾಮೀನು ಅರ್ಜಿಗೆ ನಗರ ಪೊಲೀಸರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 

ಜಾಮೀನು ಅರ್ಜಿ ಕುರಿತು ಸೋಮವಾರ ಆಕ್ಷೇಪಣಾ ಅರ್ಜಿ ಸಲ್ಲಿಸಿರುವ ಪೊಲೀಸರು, 19 ವರ್ಷದ ಯುವತಿ ಪ್ರಭಾವಶಾಲಿ ವ್ಯಕ್ತಿಯಾಗಿದ್ದು, ಜಾಮೀನಿನ ಮೇಲೆ ಆಕೆ ಬಿಡುಗಡೆಯಾಗಿದ್ದೇ ಆದರೆ, ಸಾಕ್ಷಿಗಳಿಗೆ ಬೆದರಿಕೆಯೊಡ್ಡಬಹುದು, ಇಲ್ಲವೇ ಪ್ರಭಾವ ಬೀರಬಹುದು, ದೇಶದಿಂದ ಪಲಾಯನ ಮಾಡುವ ಅವಕಾಶಗಳಿವೆ. ಹೀಗಾಗಿ ಜಾಮೀನು ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. 

ಕಳೆದ ಫೆ.22ರಂದು ರಾಷ್ಟ್ರೀಯ ನಾಗರಿಕ ನೋಂದಣಿ ಅಭಿಯಾನ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಅಮೂಲ್ಯ ಪಾಕಿಸ್ತಾನದ ಪರ ಘೋಷಣೆ ಕೂಗಿ ವಿವಾದಕ್ಕೀಡಾಗಿದ್ದರು. ಈ ಪ್ರಕರಣ ಸಂಬಂಧ ಆಕೆಯನ್ನು ಬಂಧಿಸಿದ ಉಪ್ಪಾರಪೇಟೆ ಠಾಣೆ ಪೊಲೀಸರು, ಬಳಿಕ ರಾಷ್ಟ್ರದ್ರೋಹದಡಿ ಪ್ರಕರಣ ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕೋರ್ಟ್‌ನಲ್ಲಿ ಮುಟ್ಟಿನ ರಜೆ ಸಮರ್ಥಿಸಿಕೊಂಡ ಸರ್ಕಾರ; ವಿಚಾರಣೆ ಜನವರಿ 20 ಕ್ಕೆ ಮುಂದೂಡಿಕೆ

ಕೇಂದ್ರ ಅರಣ್ಯ ಇಲಾಖೆಯಿಂದ ಸಿಗದ ಅನುಮತಿ: ಎತ್ತಿನ ಹೊಳೆ ಯೋಜನೆ ಮತ್ತಷ್ಟು ವಿಳಂಬ

ರಾಜ್ಯದ ಯುವ ಉದ್ಯೋಗಾಕಾಂಕ್ಷಿಗಳ ತಾಳ್ಮೆ ಪರೀಕ್ಷಿಸಬೇಡಿ: ಸರ್ಕಾರಕ್ಕೆ ವಿಜಯೇಂದ್ರ ಎಚ್ಚರಿಕೆ

ಭಾರತ ಬ್ರಿಕ್ಸ್ ಕರೆನ್ಸಿ ಬೇಡ ಎಂದದ್ದೇಕೆ? (ಹಣಕ್ಲಾಸು)

'BJP– RSS ಭಿನ್ನಾಭಿಪ್ರಾಯದಿಂದ ಪಿತೂರಿ: ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ'

SCROLL FOR NEXT