ಸಾಂದರ್ಭಿಕ ಚಿತ್ರ 
ರಾಜ್ಯ

ಕೊವಿಡ್-19 ನಿಯಮದಿಂದ ಗಡಿ ದಾಟದೆ ಚೆಕ್​ಪೋಸ್ಟ್​ನಲ್ಲೇ ಮದುವೆಯಾದ ತಮಿಳ್ಗನ್ನಡಿಗರು!

ಅಂತರರಾಜ್ಯ ಗಡಿದಾಟದೆ ಎರಡೂ ರಾಜ್ಯಗಳ ಗಡಿಯಲ್ಲೇ ಜೋಡಿಯೊಂದು ಮದುವೆಯಾದ ಘಟನೆ ತಮಿಳುನಾಡಿನ ಪುಣಜನೂರು ಚೆಕ್​ಪೋಸ್ಟ್​​ನಲ್ಲಿ ನಡೆದಿದೆ.

ಚಾಮರಾಜನಗರ: ಅಂತರರಾಜ್ಯ ಗಡಿದಾಟದೆ ಎರಡೂ ರಾಜ್ಯಗಳ ಗಡಿಯಲ್ಲೇ ಜೋಡಿಯೊಂದು ಮದುವೆಯಾದ ಘಟನೆ ತಮಿಳುನಾಡಿನ ಪುಣಜನೂರು ಚೆಕ್​ಪೋಸ್ಟ್​​ನಲ್ಲಿ ನಡೆದಿದೆ.

ಕರ್ನಾಟಕದ ಮತ್ತು ತಮಿಳುನಾಡು ರಾಜ್ಯಗಳ ಜೋಡಿಯೊಂದು ಅಂತರರಾಜ್ಯ ಗಡಿದಾಟದೆ ಪುಣಜನೂರು ಚೆಕ್​ಪೋಸ್ಟ್​​​ನ ಬಾರ್ಡರ್​ನಲ್ಲೇ ಮದುವೆಯಾಗಿದ್ದಾರೆ. ಬಳಿಕ ವಧು-ವರರು ತಮ್ಮ-ತಮ್ಮ ಊರಿಗೆ ತೆರಳಿದ್ದಾರೆ‌.

ಅಂತರ್​ ರಾಜ್ಯ ಪ್ರವೇಶಕ್ಕೆ ನಿರ್ಬಂಧ ಇರುವುದರಿಂದ ರಾಜ್ಯದ ಕೊಡಗು ಜಿಲ್ಲೆಯ ಗೋಣಿಕೊಪ್ಪದ ಹೊಂಬಾಳಯ್ಯ, ತ್ರಿವೇಣಿ ದಂಪತಿ ಪುತ್ರಿ ಯಶಸ್ಮಿತ ಹಾಗೂ ತಮಿಳುನಾಡಿನ ಮೆಟ್ಟುಪಾಳ್ಯಂ ನಿವಾಸಿ ಶಕ್ತಿವೇಲು-ಲತಾ ದಂಪತಿ ಪುತ್ರ ಸತೀಶ್ ಕುಮಾರ್ ಗಡಿ ದಾಟದೆ, ಪುಣಜನೂರು ಚೆಕ್​ಪೋಸ್ಟ್​​ನ ಗಣೇಶ ಗುಡಿಯಲ್ಲೇ ವಿವಾಹವಾಗಿದ್ದಾರೆ. ವಿವಾಹವಾದ ಬಳಿಕ ವಧು-ವರರು ತಮ್ಮ-ತಮ್ಮ ಊರಿಗೆ ಮರಳಿದ್ದಾರೆ‌. ಈ ಮದುವೆಗೆ ಚೆಕ್​ಪೋಸ್ಟ್​​ನಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಸಾಕ್ಷಿಯಾದರು.

-ಗುಳಿಪುರ ನಂದೀಶ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

''ಲೋ-ವೇಜ್ ಫಾರಿನರ್ಸ್ ಬೇಡ'' ಎಂದ ಜೆಡಿ ವ್ಯಾನ್ಸ್: 'ನಿಮ್ಮ ಹಿಂದೂ ಪತ್ನಿಯೂ ವಿದೇಶಿಯಲ್ಲವೇ?' ಉಷಾ ವ್ಯಾನ್ಸ್ ಹಿನ್ನೆಲೆ ಹಿಡಿದು ನೆಟ್ಟಿಗರ ಹಿಗ್ಗಾಮುಗ್ಗಾ ಟ್ರೋಲ್..!

'ಪನಾಮ ಕಾಲುವೆ ಬಿಟ್ಟುಕೊಟ್ಟಿದ್ದು ದೊಡ್ಡ ಮೂರ್ಖತನದ ನಿರ್ಧಾರ': ಚೀನಾ ಕಬಳಿಸಲು ಯತ್ನಿಸುತ್ತಿದೆ; ಟ್ರಂಪ್

Hindi Imposition: BEL ಸರ್ಕಲ್‌ನಲ್ಲಿ ಹಿಂದಿ ನಾಮಫಲಕ ಕಿತ್ತೆಸೆದ ಕರವೇ ಕಾರ್ಯಕರ್ತರು; FIR ದಾಖಲು

ಭಾರತಕ್ಕೆ ಆಗಮಿಸಿದ ಜಪಾನ್ ಪ್ರಧಾನಿ; ಜು.2 ರಂದು ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ

ಗಡಿ ವಿವಾದ ಬಗೆಹರಿಸಲು ಭಾರತದೊಂದಿಗೆ ರಾಜತಾಂತ್ರಿಕ ಮಾತುಕತೆಗೆ ಸಿದ್ಧ- ನೇಪಾಳ ವಿದೇಶಾಂಗ ಸಚಿವ ಖನಾಲ್