ಸಾಂದರ್ಭಿಕ ಚಿತ್ರ 
ರಾಜ್ಯ

ಎಲ್ಲಿ ನೋಡಿದರಲ್ಲಿ ಕಸ, ತ್ಯಾಜ್ಯ: ಸ್ವಚ್ಛ ನಗರ ಪಟ್ಟಿಯಲ್ಲಿ ಬೆಂಗಳೂರಿಗಿಲ್ಲ ಸ್ಥಾನ!

ತ್ಯಾಜ್ಯ ನಿರ್ವಹಣೆಯಲ್ಲಿ ಇತ್ತೀಚೆಗೆ ಮೈಸೂರು ನಗರಕ್ಕೆ ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಇಲಾಖೆಯಿಂದ 5 ಸ್ಟಾರ್ ರೇಟಿಂಗ್ ಸಿಕ್ಕಿತ್ತು. ಬೆಂಗಳೂರು ನಗರಕ್ಕೆ 4 ಅಥವಾ ಮೂರು ಸ್ಟಾರ್ ಕೂಡ ರೇಟಿಂಗ್ ನಲ್ಲಿ ಸಿಕ್ಕಿರಲಿಲ್ಲ.

ಬೆಂಗಳೂರು: ತ್ಯಾಜ್ಯ ನಿರ್ವಹಣೆಯಲ್ಲಿ ಇತ್ತೀಚೆಗೆ ಮೈಸೂರು ನಗರಕ್ಕೆ ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಇಲಾಖೆಯಿಂದ 5 ಸ್ಟಾರ್ ರೇಟಿಂಗ್ ಸಿಕ್ಕಿತ್ತು. ಆ ಪಟ್ಟಿಯಲ್ಲಿ ಬೆಂಗಳೂರಿಗೆ ಯಾವ ಸ್ಟಾರ್ ಸಿಗಲಿಲ್ಲ, ಕನಿಷ್ಠ 4 ಅಥವಾ ಮೂರು ಸ್ಟಾರ್ ರೇಟಿಂಗ್ ಕೂಡ ಸಿಕ್ಕಿರಲಿಲ್ಲ.

ಅದಾಗಿಯೂ ನಗರದಲ್ಲಿ ತ್ಯಾಜ್ಯ ನಿರ್ವಹಣೆ ವಿಷಯದಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸಮಿತಿ ಸಮಜಾಯಿಷಿ ನೀಡುತ್ತಿದ್ದಾರೆ. ಕೋವಿಡ್-19ನಿಂದಾಗಿ ಬೆಂಗಳೂರು ಸ್ಟಾರ್ ರೇಟಿಂಗ್ ನಲ್ಲಿ ಅವಕಾಶ ಕಳೆದುಕೊಂಡಿದೆ ಎಂಬುದು ಅವರ ಉತ್ತರ.

ಘನತ್ಯಾಜ್ಯ ನಿರ್ವಹಣೆ ದುಂಡು ಮೇಜಿನ ಎಸ್ ಕೆ ರಮಾಕಾಂತ್ ಹೇಳುವುದೇ ಬೇರೆ. ಅಧಿಕಾರಿಗಳಲ್ಲಿ ರಾಜಕೀಯ ಇಚ್ಛಾಶಕ್ತಿ ಇಲ್ಲ, ಸರ್ಕಾರಕ್ಕೂ ನಗರವನ್ನು ಅಭಿವೃದ್ಧಿಪಡಿಸಬೇಕೆಂಬ ಮನಸ್ಸಿಲ್ಲ. ಹಲವು ಯೋಜನೆಗಳನ್ನು ಮಾಡಿದರೂ ಕೂಡ ತಳಮಟ್ಟದಲ್ಲಿ ಕೆಲಸವಾಗುತ್ತಿಲ್ಲ. ತ್ಯಾಜ್ಯ ನಿರ್ವಹಣೆ ನಿರೀಕ್ಷಿತ ಮಟ್ಟದಲ್ಲಿಲ್ಲ ಮತ್ತು ತ್ಯಾಜ್ಯ ನೀರಿನ ಮೂಲಗಳ ಜೊತೆ ಬೆರೆಯುತ್ತಿದೆ. ವೈದ್ಯಕೀಯ ತ್ಯಾಜ್ಯ ವಿಲೇವಾರಿಯ ಗುತ್ತಿಗೆ ಇನ್ನೂ ಅಂತಿಮಗೊಂಡಿಲ್ಲ ಎನ್ನುತ್ತಾರೆ.

ಘನತ್ಯಾಜ್ಯ ನಿರ್ವಹಣೆಯ ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ಡಿ, ಇದು ಸ್ವಚ್ಛ ಭಾರತ ಅಭಿಯಾನ ರೇಟಿಂಗ್ ನ ಮೊದಲ ಭಾಗವಾಗಿದ್ದು ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಬೆಂಗಳೂರಿನ ರೇಟಿಂಗ್ ಹೆಚ್ಚಲಿದೆ ಎನ್ನುತ್ತಾರೆ.

ಇಡೀ ರಾಜ್ಯದ ಘನತ್ಯಾಜ್ಯ ನಿರ್ವಹಣೆಯಲ್ಲಿ ಸುಮಾರು ಶೇಕಡಾ 50ರಷ್ಟು ಬೆಂಗಳೂರಿನಲ್ಲಿ ಉತ್ಪತ್ತಿಯಾಗುತ್ತದೆ. ನಗರದಲ್ಲಿ ಉತ್ಪತ್ತಿಯಾಗುವ 5,350 ಟನ್ ತ್ಯಾಜ್ಯಗಳಲ್ಲಿ ಕೇವಲ 3 ಸಾವಿರ ಟನ್ ತ್ಯಾಜ್ಯ ವೈಜ್ಞಾನಿಕವಾಗಿ ವಿಲೇವಾರಿಯಾಗುತ್ತಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಅಧ್ಯಕ್ಷ ಜಸ್ಟೀಸ್ ಸುಭಾಷ್ ಬಿ ಆದಿ ಹೇಳುತ್ತಾರೆ. ಘನತ್ಯಾಜ್ಯ ನಿರ್ವಹಣೆಯ ಅನೇಕ ಸಿಬ್ಬಂದಿ ಕೋವಿಡ್-19 ಕರ್ತವ್ಯದ ಮೇಲೆ ಹೋಗಿರುವುದರಿಂದ ಸದ್ಯ ಈ ಕೆಲಸ ಸ್ಥಗಿತಗೊಂಡಿದೆ ಎನ್ನುತ್ತಾರೆ.

ಆದರೆ ಬಿಬಿಎಂಪಿ ಅಧಿಕಾರಿಗಳು ತಳಮಟ್ಟದಲ್ಲಿ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬುದು ನಾಗರಿಕರ ಆರೋಪವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT