ಸಂಗ್ರಹ ಚಿತ್ರ 
ರಾಜ್ಯ

ಇಂದಿನಿಂದ ರೈಲ್ವೆ ಟಿಕೆಟ್ ಇ-ಬುಕಿಂಗ್ ಆರಂಭ: ನೈಋತ್ಯ ರೈಲ್ವೆ

ಕೇಂದ್ರ ಸರ್ಕಾರ ಜೂನ್ 1ರಿಂದ ನಿಬಂಧನೆಗಳನುಸಾರ ರೈಲು ಸಂಚಾರಕ್ಕೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ವಿವಿಧ ರೈಲುಗಳಿಗೆ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಇ ಬುಕ್ಕಿಂಗ್ ಆರಂಭವಾಗಿದೆ. 

ಬೆಂಗಳೂರು: ಕೇಂದ್ರ ಸರ್ಕಾರ ಜೂನ್ 1ರಿಂದ ನಿಬಂಧನೆಗಳನುಸಾರ ರೈಲು ಸಂಚಾರಕ್ಕೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ವಿವಿಧ ರೈಲುಗಳಿಗೆ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಇ ಬುಕ್ಕಿಂಗ್ ಆರಂಭವಾಗಿದೆ. 

ಈ ಕುರಿತು ನೈರುತ್ಯ ರೈಲ್ವೆ ಮಾಹಿತಿ ನೀಡಿದ್ದು, ಮುಂಬೈ-ಕೆಎಸ್ಆರ್ ಬೆಂಗಳೂರು ಉದ್ಯಾನ್ ಎಕ್ಸಪ್ರೆಸ್‌, ಮುಂಬೈ-ಗದಗ ಎಕ್ಸ್‌ಪ್ರೆಸ್‌, ದಾನಪುರ-ಕೆಎಸ್ಆರ್ ಬೆಂಗಳೂರು ಸಂಘಮಿತ್ರ ಎಕ್ಸ್‌ಪ್ರೆಸ್‌ ರೈಲುಗಳಿಗೆ ಪ್ರಯಾಣಿಕರು ಟಿಕೆಟ್ ಕಾಯ್ದಿರಿಸಬಹುದಾಗಿದೆ. 

ವಾರಕ್ಕೆ ಎರಡು ಬಾರಿ ಸಂಚರಿಸುವ ನವದೆಹಲಿ-ಯಶವಂತಪುರ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್, ಹುಬ್ಬಳ್ಳಿ-ಬೆಂಗಳೂರು ಜನಶತಾಬ್ದಿ ಎಕ್ಸ್‌ಪ್ರೆಸ್, ಯಶವಂತಪುರ-ಶಿವಮೊಗ್ಗ ಜನಶತಾಬ್ದಿ ಎಕ್ಸ್‌ಪ್ರೆಸ್‌, ವಾಸ್ಕೋಡಗಾಮ-ಹಜರತ್ ನಿಜಾಮುದ್ದೀನ್ ಗೋವಾ ಎಕ್ಸ್‌ಪ್ರೆಸ್‌ ಮತ್ತು ಹೌರಾ- ಯಶವಂತಪುರ ಹೌರಾ ದುರಂತೊ ಎಕ್ಸ್‌ಪ್ರೆಸ್‌ ರೈಲುಗಳು ಕೂಡ ಜೂನ್ 1ರಿಂದ ಸಂಚರಿಸಲಿವೆ ಎಂದು ಇಲಾಖೆ ಮಾಹಿತಿ ನೀಡಿದೆ.

ಟಿಕೆಟ್ ದರದಲ್ಲಿ ಊಟದ ದರ ಸೇರಿಸಿಲ್ಲ, ಊಟಕ್ಕೆ ಪ್ರತ್ಯೇಕ ಹಣ ನೀಡಬೇಕಿದೆ. ರೈಲಿನಲ್ಲಿ ಕೆಲವು ಆಹಾರ ಮಾರಾಟದ ವ್ಯವಸ್ಥೆ ಇದೆ, ಉಳಿದಂತೆ ರೈಲು ನಿಲ್ದಾಣದಲ್ಲಿರುವ ಅಂಗಡಿಗಳಲ್ಲಿ ಆಹಾರ ಪದಾರ್ಥ ಮಾರಾಟ ಮಾಡಲಾಗುತ್ತದೆ. ಜೂನ್ 1 ರಿಂದ 200 ರೈಲುಗಳು ಮತ್ತು 16 ವಿಶೇಷ ರೈಲುಗಳ ಸಂಚಾರ ಆರಂಭವಾಗಲಿದೆ. ಯಾವುದೇ ರೀತಿಯ ಬ್ಲಾಂಕೆಟ್ ಕೂಡ ನೀಡುವುದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್‌: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT