ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ನಾಗವಾರ, ಜ್ಞಾನ ಭಾರತಿ ವಾರ್ಡ್ ಸೀಲ್ ಡೌನ್

ಎರಡು ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಬಿಬಿಎಂಪಿ ಅಧಿಕಾರಿಗಳು ನಾಗವಾರ ಮತ್ತು ಜ್ಞಾನ ಭಾರತಿ ವಾರ್ಡ್ ಗಳನ್ನು ಸೀಲ್ ಡೌನ್ ಮಾಡಿದ್ದಾರೆ.

ಬೆಂಗಳೂರು: ಎರಡು ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಬಿಬಿಎಂಪಿ ಅಧಿಕಾರಿಗಳು ನಾಗವಾರ ಮತ್ತು ಜ್ಞಾನ ಭಾರತಿ ವಾರ್ಡ್ ಗಳನ್ನು ಸೀಲ್ ಡೌನ್ ಮಾಡಿದ್ದಾರೆ.

ಈ ಸೋಂಕಿತರರು ಯಾರ್ಯಾರ ಜೊತೆ ಸಂಪರ್ಕ ಹೊಂದಿದ್ದರು ಎಂಬ ಬಗ್ಗೆ ಇನ್ನೂ ಮಾಹಿತಿ ದೊರೆತಿಲ್ಲ,  ಜ್ಞಾನ ಭಾರತಿ ವಾರ್ಡ್ ನ ರೋಗಿ ಸಾವನ್ನಪ್ಪಿದ್ದು, ರೋಗಿ ಸತ್ತ ನಂತರ ಕೊರೋನಾ ಇದ್ಧದ್ದು ಧೃಡಪಟ್ಟಿದೆ.  ನಾಗವಾರದ ರೋಗಿ  ಕಳೆದ ಮೂರು ತಿಂಗಳಿಂದ ಹಾಸಿಗೆ ಹಿಡಿದಿದ್ದಾರೆ.

ವಾರ್ಡ್ ಗೆ ಭೇಟಿ ನೀಡಿದ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್, ತಕ್ಷಣವೇ ಎರಡು ವಾರ್ಡ್ ಗಳನ್ನು ಸೀಲ್ ಡೌನ್ ಮಾಡಿದ್ದಾರೆ. ಜ್ಞಾನಭಾರತಿ ನಗರದ ರೋಗಿಗೆ ಯಾವುದೇ ಲಕ್ಷಣಗಳಿರಲಿಲ್ಲ, ಆತ ತನ್ನ ಸ್ನೇಹಿತನನ್ನು ನೋಡುವ ಸಲುವಾಗಿ ಖಾಸಗಿ ಆಸ್ಪತ್ರೆಗೆ ತೆರಳಿದ್ದ ಈ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದ, ಮರಣೋತ್ತರ ಪರೀಕ್ಷೆಯಲ್ಲಿ ಆತನಿಗೆ ಕೊರೋನಾ ಇರುವುದು ದೃಢವಾಯಿತು, ಹೀಗಾಗ್ 129ನೇ ವಾರ್ಡ್ ಸೀಲ್ ಡೌನ್ ಮಾಡಲಾಗಿದೆ.

ನಾಗವಾರದಲ್ಲಿ 30 ರೋಗಿ ಬೌರಿಂಗ್ ವರ್ಷದ ವ್ಯಕ್ತಿ ಕ್ಷಯರೋಗದಿಂದ ಬಳಲುತ್ತಿದ್ದು, ಆತ ಮದ್ಯವ್ಯಸನಿಯಾಗಿದ್ದ, ಆತನಿಗೂ ಸೋಂಕು ಖಾತರಿಯಾಗಿದ್ದು,  ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆತನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಎಲ್ಲಾ 53 ವ್ಯಕ್ತಿಗಳನ್ನು ಕ್ವಾರಂಟೈನ್ ನಲ್ಲಿಡಲಾಗಿದೆ. ಕೆ.ಜಿ.ಹಳ್ಳಿಯ ಮುತ್ತಪ್ಪ ಕೊಳೆಗೇರಿ ಜನನಿಬಿಡವಾಗಿದ್ದು, ಅಧಿಕಾರಿಗಳು ಸೂಕ್ಷ್ಮ ನಿಗಾ ಇಡುತ್ತಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT