ಸಾಂದರ್ಭಿಕ ಚಿತ್ರ 
ರಾಜ್ಯ

ರಾಯಬಾಗ: ಈಜಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಬಾಲಕ

ಗೆಳೆಯರೊಂದಿಗೆ ಘಟಪ್ರಭಾ ಎಡದಂಡೆ ಕಾಲುವೆಗೆ ಈಜಲು ಹೋಗಿದ್ದ ಯುವಕ ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ರಾಯಬಾಗ ತಾಲೂಕಿನ ಮುಘಳಖೋಡ ಪಟ್ಟಣದಲ್ಲಿ ನಡೆದಿದೆ. 

ರಾಯಬಾಗ: ಗೆಳೆಯರೊಂದಿಗೆ ಘಟಪ್ರಭಾ ಎಡದಂಡೆ ಕಾಲುವೆಗೆ ಈಜಲು ಹೋಗಿದ್ದ ಯುವಕ ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ರಾಯಬಾಗ ತಾಲೂಕಿನ ಮುಘಳಖೋಡ ಪಟ್ಟಣದಲ್ಲಿ ನಡೆದಿದೆ. 

ಬಸವರಾಜ ಗೌಲೆತ್ತಿನವರ(೭) ಕೊಚ್ಚಿಕೊಂಡು ಹೋದ ಬಾಲಕ. ಬೀಕರ ಬಿಸಿಲಿನಿಂದ ಮೈ ತಂಪು ಮಾಡಿಕೊಳ್ಳಬೇಕೆಂದು ಈಜಲು ಘಟಪ್ರಭಾ ಯಡದಂಡೆ ಕಾಲುವೆಗೆ ಹೋಗಿದ್ದು, ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ. ಇದನ್ನರಿತ ಆತನ ಗೆಳೆಯರು ಊರಲ್ಲಿ ತಿಳಿಸಿದ್ದ ಹಿನ್ನೆಲೆಯಲ್ಲಿ ಸ್ಥಳೀಯರ ಸಹಾಯದಿಂದ ಆತನ ಹುಡುಕಾಟದಲ್ಲಿ ನಿರತರಾಗಿದ್ದಾರೆ.

ಘಟನೆ ತಿಳಿದ ತಕ್ಷಣ ಸ್ಥಳೀಯರು ನಿರಂತರವಾಗಿ ಹುಡುಕಾಟದಲ್ಲಿ ತೊಡಗಿದ್ದರೂ ಬಾಲಕ ಪತ್ತೆಯಾಗಿಲ್ಲ. ಇದರಿಂದ ಬಾಲಕನ ತಂದೆ ತಾಯಿ ಕುಟುಂಬಸ್ಥರ ಅಕ್ರಂಧನ ಮುಗಿಲು ಮುಟ್ಟಿದೆ.

ಈ ಘಟನೆ ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಯಕತ್ವ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಗರಂ; ನಾಯಕರಿಗೆ ಖಡಕ್ ಸಂದೇಶ

ಭಕ್ತಿ ಗೀತೆ ಹಾಡಿದ್ದಕ್ಕೆ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿ ಮೇಲೆ ಮೆಹಬೂಬ್ ಮಲ್ಲಿಕ್‌ನಿಂದ ಹಲ್ಲೆಗೆ ಯತ್ನ, Video Viral

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿನ ವೀಸಾ ಕೇಂದ್ರ ಸ್ಥಗಿತಗೊಳಿಸಿದ ಭಾರತ

U-19 Asia Cup ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಹೀನಾಯ ಸೋಲು!

ಡಿ.26ರಿಂದ ರೈಲ್ವೆ ಪ್ರಯಾಣ ದರ ಏರಿಕೆ; 500 ಕಿ.ಮೀವರೆಗಿನ ಪ್ರಯಾಣಕ್ಕೆ ನಾನ್ ಎಸಿ ರೈಲುಗಳಲ್ಲಿ 10 ರೂ. ಹೆಚ್ಚಳ!

SCROLL FOR NEXT